ಭೂಗತ ಪಾತಕಿ ರವಿ ಪೂಜಾರಿ ಮುಂಬೈ ಪೊಲೀಸರ ವಶಕ್ಕೆ | ಹೈಕೋರ್ಟ್ ಗೆ ಅರ್ಜಿ

Prasthutha|

ಬೆಂಗಳೂರು : ಭೂಗತ ಪಾತಕಿ ರವಿ ಪೂಜಾರಿ ತನ್ನನ್ನು ಮುಂಬೈಗೆ ಕರೆದುಕೊಂಡು ಹೋದರೆ ಜೀವಕ್ಕೆ ಅಪಾಯವಿದೆ ಎಂದು ಕರ್ನಾಟಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾನೆ. ರವಿ ಪೂಜಾರಿಗೆ ಭದ್ರತೆ ಒದಗಿಸುವಂತೆ ಮುಂಬೈ ಪೊಲೀಸರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

- Advertisement -

ರವಿ ಪೂಜಾರಿಯನ್ನು 10 ದಿನಗಳ ಕಾಲ ವಶಕ್ಕೆ ನೀಡುವಂತೆ ಮುಂಬೈ ಪೊಲೀಸರು ಬೆಂಗಳೂರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಮಾನ್ಯ ಮಾಡಿದ್ದ ನ್ಯಾಯಾಲಯ ವಶಕ್ಕೆ ನೀಡಿ ಆದೇಶ ಹೊರಡಿಸಿತ್ತು. ಈ ಆದೇಶವನ್ನು ರವಿ ಪೂಜಾರಿ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದಾನೆ.

2019ರ ಜ.19ರಂದು ದಕ್ಷಿಣ ಆಫ್ರಿಕಾದ ಸೆನೆಗಲ್ ನಲ್ಲಿ ರವಿ ಪೂಜಾರಿಯನ್ನು ಬಂಧಿಸಲಾಗಿತ್ತು. ಕರ್ನಾಟಕ ಮತ್ತು ಮುಂಬೈನಲ್ಲಿ ರವಿ ಪೂಜಾರಿ ವಿರುದ್ಧ 120ಕ್ಕೂ ಹೆಚ್ಚು ಪ್ರಕರಣಗಳಿವೆ ಎನ್ನಲಾಗಿದೆ.

Join Whatsapp