ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಆದೇಶ ಕೈಬಿಟ್ಟ ಸರಕಾರ | ಕನ್ನಡಿಗರ ಒತ್ತಡಕ್ಕೆ ಮಣಿದ ಬಿಎಸ್ ವೈ

Prasthutha|

ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಆದೇಶವನ್ನು ಕೈಬಿಡಲು ಸರಕಾರ ನಿರ್ಧರಿಸಿದೆ. ಅದಕ್ಕೆ ಬದಲಾಗಿ ಮರಾಠ ಸಮುದಾಯಕ್ಕೆ ಸೀಮಿತವಾಗಿ ನಿಗಮ ರಚಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ವರದಿಯೊಂದು ತಿಳಿಸಿದೆ.

- Advertisement -

ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕನ್ನಡಿಗರ ವಿರೋಧಕ್ಕೆ ಮಣಿದ ಸರ್ಕಾರ ಈ ಆದೇಶವನ್ನು ರದ್ದು ಮಾಡಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮರಾಠ ಸಮುದಾಯಕ್ಕೆ ಸೀಮಿತವಾದ ನಿಗಮ ರಚಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

- Advertisement -

ಪ್ರಾಧಿಕಾರ ರಚಿಸುವಾಗ ಹೊಸದಾಗಿ ಕಾಯ್ದೆ ರೂಪಿಸಬೇಕಿದೆ. ನಿಗಮಕ್ಕೆ ಸರ್ಕಾರವೇ ತೀರ್ಮಾನ ಕೈಗೊಳ್ಳಬಹುದಾಗಿದೆ. ಮರಾಠ ಸಮುದಾಯಕ್ಕೆ ಸೀಮಿತವಾಗಿ ನಿಗಮ ರಚಿಸಲಾಗುವುದು ಎನ್ನಲಾಗಿದೆ.

Join Whatsapp