ಸುರತ್ಕಲ್ | ಮಹಿಳೆಯ ಹತ್ಯೆಗೈದು ತಾನೂ ಆತ್ಮಹತ್ಯೆಗೈದ ಹೂವಿನ ವ್ಯಾಪಾರಿ

Prasthutha|

ಸುರತ್ಕಲ್ : ವಿವಾಹಿತ ಮಹಿಳೆಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದನೆನ್ನಲಾದ ಹೂವಿನ ವ್ಯಾಪಾರಿಯೊಬ್ಬ, ಆಕೆಯನ್ನು ಹತ್ಯೆ ಮಾಡಿದುದಲ್ಲದೆ, ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಸುರತ್ಕಲ್ ನಲ್ಲಿ ನಡೆದಿದೆ.

- Advertisement -

ಕುಳಾಯಿ ನಿವಾಸಿ ವಸಂತ್(44) ಏಳೆಂಟು ವರ್ಷಗಳಿಂದ ಹೂವಿನ ವ್ಯಾಪಾರ ನಡೆಸುತ್ತಿದ್ದ. ಈತನ ಅಂಗಡಿಗೆ ಹೂವು ಕೊಳ್ಳಲು ಬರುತ್ತಿದ್ದ ಸೂರಿಂಜೆಯ ವಿವಾಹಿತ ಮಹಿಳೆಯ ಪರಿಚಯವಾಗಿ ಅದು ಪ್ರೇಮಕ್ಕೆ ತಿರುಗಿತ್ತು ಎನ್ನಲಾಗಿದೆ.

ಈ ನಡುವೆ ಇಬ್ಬರ ಮಧ್ಯೆ, ಯಾವುದೋ ಕಾರಣಕ್ಕೆ ವೈಮನಸ್ಸು ಸೃಷ್ಟಿಯಾಗಿದ್ದು, ಬುಧವಾರ ಮಹಿಳೆಯನ್ನು ಹತ್ಯೆಗೈದು ವಸಂತ್ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಘಟನೆಗೆ ಸ್ಪಷ್ಟ ಕಾರಣವೇನೆಂದು ತನಿಖೆಯಿಂದಷ್ಟೇ ತಿಳಿಯಬೇಕಾಗಿದೆ.

- Advertisement -

ಸ್ಥಳಕ್ಕೆ ಎಸಿಪಿ ಬೆಳ್ಳಿಯಪ್ಪ, ಸುರತ್ಕಲ್ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ. ಮೃತದೇಹವನ್ನು ಪೋಸ್ಟ್ ಮಾರ್ಟಂಗೆ ಕಳುಹಿಸಿಕೊಡಲಾಗಿದೆ.

Join Whatsapp