Home ಟಾಪ್ ಸುದ್ದಿಗಳು ಅಧಿಕಾರಿಗಳ ಒತ್ತಡಕ್ಕೆ ಮಣಿದು ಕರ್ತವ್ಯ ನಿರ್ವಹಿಸಿದ ಬಸ್ ಚಾಲಕ | ಹೃದಯಾಘಾತದಿಂದ ನಿಧನ

ಅಧಿಕಾರಿಗಳ ಒತ್ತಡಕ್ಕೆ ಮಣಿದು ಕರ್ತವ್ಯ ನಿರ್ವಹಿಸಿದ ಬಸ್ ಚಾಲಕ | ಹೃದಯಾಘಾತದಿಂದ ನಿಧನ

ಬೀದರ್: ಔರಾದ ಘಟಕದ ಬಸ್ ಚಾಲಕ ಮಕ್ಬೂಲ್ (42) ಅವರು ಅಧಿಕಾರಿಗಳ ಒತ್ತಡಕ್ಕೆ ಮಣಿದು ಕರ್ತವ್ಯದಲ್ಲಿ ನಿರತರಾಗಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ದೇಗಲೂರಿನಲ್ಲಿ ನಡೆದಿದೆ.

ಔರಾದನಿಂದ ದೇಗಲೂರಿಗೆ ತೆರಳಿದ ಬಳಿಕ ಮಕ್ಬೂಲ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಅಲ್ಲಿದ್ದ ಸಾರಿಗೆ ಸಿಬ್ಬಂದಿ ಆತನನ್ನು ಆಸ್ಪತ್ರೆಗೆ ಕೊಂಡೊಯ್ಯುವಾಗ ದಾರಿಮಧ್ಯೆಯೇ ಸಾವನ್ನಪ್ಪಿದ್ದಾರೆ.

ಸಾರಿಗೆ ಸಿಬ್ಬಂದಿಗಳು ಮುಷ್ಕರ ನಡೆಸುತ್ತಿರುವ ಹಿನ್ನಲೆಯಲ್ಲಿ ಚಾಲಕ ಮಕ್ಬೂಲ್ ಸಹ ಕರ್ತವ್ಯಕ್ಕೆ ಹಾಜರಾಗಲು ನಿರಾಕರಿಸಿದ್ದರು. ಆದರೆ, ಅಧಿಕಾರಿಗಳ ಒತ್ತಡಕ್ಕೆ ಮಣಿದು ಬಸ್ ಕಾರ್ಯಾಚರಣೆ ಮಾಡಿದ್ದು, ಅಧಿಕಾರಿಗಳ ಮಾನಸಿಕ ಕಿರುಕುಳದಿಂದಾಗಿಯೇ ಈ ಅನಾಹುತ ಸಂಭವಿಸಿದೆ ಎಂದು ಸಾರಿಗೆ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Join Whatsapp
Exit mobile version