Home ಟಾಪ್ ಸುದ್ದಿಗಳು “ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ 1061 ನೆಯ ಜಯಂತಿ ಮಹೋತ್ಸವ” ದಲ್ಲಿ ಚಾಮುಂಡೇಶ್ವರಿ ಕ್ಷೇತ್ರದ...

“ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ 1061 ನೆಯ ಜಯಂತಿ ಮಹೋತ್ಸವ” ದಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ ದೇವೇಗೌಡ ಭಾಗಿ

ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಸುತ್ತೂರು ಶ್ರೀ ಕ್ಷೇತ್ರದಲ್ಲಿ ಇಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳ ದಿವ್ಯ ಸಾನಿಧ್ಯದೊಂದಿಗೆ ಹಮ್ಮಿಕೊಂಡಿದ್ದ “ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ 1061 ನೆಯ ಜಯಂತಿ ಮಹೋತ್ಸವ” ಹಾಗೂ “ಪಂಚಾಂಗ ಬಿಡುಗಡೆ ಮತ್ತು ಕೃತಿ ಲೋಕಾರ್ಪಣೆ ಕಾರ್ಯಕ್ರಮ”ದಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಜನಪ್ರಿಯ ಶಾಸಕ ಪಾಲ್ಗೊಂಡರು, ಈ ವೇಳೆ ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪ ರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಹಕಾರಿ ಸಚಿವರು ಹಾಗೂ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ ಶ್ರೀ ಎಸ್. ಟಿ. ಸೋಮಶೇಖರ್ ರವರು, ಜಿಲ್ಲೆಯ ಶಾಸಕರ ವರ್ಗ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Join Whatsapp
Exit mobile version