ಉಡುಪಿ| ‘ಲವ್ ಜಿಹಾದ್’ ವಿರುದ್ಧ ಕರ್ನಾಟಕ ಕಠಿಣ ಕ್ರಮ ಕೈಗೊಳ್ಳಲಿದೆ| ನಳಿನ್ ಕುಮಾರ್

Prasthutha|

ಹೆಚ್ಚುತ್ತಿರುವ ಲವ್ ಜಿಹಾದ್ ವಿರುದ್ಧ ರಾಜ್ಯದಲ್ಲೂ ಕಠಿಣ ಕಾನೂನು ಕ್ರಮ ಜಾರಿಗೊಳಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

- Advertisement -

ಮಣಿಪಾಲದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ‌ ಅವರು, ಇಂತಹ ತಂತ್ರಗಳ ವಿರುದ್ಧ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಚಿವ ಸಂಪುಟ ಶೀಘ್ರವೇ ತೀರ್ಮಾನ ಕೈಗೊಳ್ಳಲಿದೆ ಎಂದರು.

” ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯನ್ನು ನಾವೆಲ್ಲ ಗಂಭೀರತೆಯಿಂದ ತೆಗೆದುಕೊಂಡಿದ್ದೇವೆ. ಪೇಜ್ ಪ್ರಮುಖ್ ನಿಯೋಜನೆ, ಸಂಘಟನಾತ್ಮಕ ಗೆಲುವಿಗೆ ಪಂಚರತ್ನ ಸಮಿತಿ ಸಹಿತ ಪ್ರತಿ ಜಿಲ್ಲೆಯಲ್ಲೂ ವಾರ್ ರೂಂ, ಕಾಲ್ ಸೆಂಟರ್, ಕುಟುಂಬ ಮಿಲನದಂತಹ ಪಂಚಸೂತ್ರ ಅಳವಡಿಸಲಾಗಿದೆ ಎಂದು ಹೇಳಿದ್ದಾರೆ.

- Advertisement -

ಮಂಗಳೂರಿನ ರಸ್ತೆಯೊಂದರಲ್ಲಿ ಕಂಡು ಬಂದ ರಾಷ್ಟ್ರ ವಿರೋಧಿ ಘೋಷಣೆ, ಬರಹ ಕುರಿತಂತೆ ಮಾತನಾಡಿದ ಅವರು, ಅದನ್ನು ಯಾರೇ ಹಾಕಿದ್ದರೂ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ, ಸಂಸದೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನಕೈ, ಕೋಲಾರ ಸಂಸದ ಮುನಿಸ್ವಾಮಿ, ಗೀತಾ ವಿವೇಕಾನಂದ, ಉದಯ ಕುಮಾರ್ ಶೆಟ್ಟಿ, ಕುಯಿಲಾಡಿ ಸುರೇಶ್ ನಾಯಕ್, ಲಾಲಾಜಿ ಆರ್. ಮೆಂಡನ್, ಕೆ. ರಘುಪತಿ ಭಟ್, ಮಟ್ಟಾರು ರತ್ನಾಕರ ಹೆಗ್ಡೆ, ದಿನಕರ ಬಾಬು ಮತ್ತಿತರರು ಉಪಸ್ಥಿತರಿದ್ದರು.

Join Whatsapp