ಉಳ್ಳಾಲ: ಸ್ಪೀಕರ್ ಯು.ಟಿ. ಖಾದರ್ ಬ್ಯಾನರ್’ಗಳನ್ನು ಹರಿದ ಕಿಡಿಗೇಡಿಗಳು

Prasthutha|

ಮಂಗಳೂರು: ವಿಧಾನಸಭೆ ಸಭಾಧ್ಯಕ್ಷರಾಗಿ ಆಯ್ಕೆಯಾದ ಶಾಸಕ ಯು.ಟಿ.ಖಾದರ್ ಅಭಿನಂದಿಸಿ ಅಭಿಮಾನಿಗಳು ಹಾಕಿದ್ದ ಫ್ಲೆಕ್ಸ್ ಗಳನ್ನ ಕಿಡಿಗೇಡಿಗಳು ನಿನ್ನೆ ರಾತ್ರಿ ಹರಿದು ಹಾಕಿದ್ದಾರೆ.

- Advertisement -


ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿಂದ ಉಳ್ಳಾಲದ ಅಬ್ಬಕ್ಕ ವೃತ್ತದವರೆಗಿನ ರಸ್ತೆಯ ವಿಭಜಕ ಮತ್ತು ಇಕ್ಕೆಲಗಳಲ್ಲಿ ಯು.ಟಿ ಖಾದರ್ ಅವರಿಗೆ ಅಭಿನಂದಿಸಿ ಫ್ಲೆಕ್ಸ್ ಗಳನ್ನ ಹಾಕಲಾಗಿತ್ತು.ಕಳೆದ ಭಾನುವಾರ ಉಳ್ಳಾಲದ ಮಹಾತ್ಮಗಾಂಧಿ ರಂಗ ಮಂದಿರದಲ್ಲಿ ಶಾಸಕರಿಗೆ ನಡೆದ ನಾಗರಿಕ ಸನ್ಮಾನಕ್ಕೂ ಶುಭ ಕೋರಿ ಫ್ಲೆಕ್ಸ್ ಗಳನ್ನು ಹಾಕಲಾಗಿತ್ತು.ನಿನ್ನೆ ರಾತ್ರಿ ಕಿಡಿಗೇಡಿಗಳು ಫ್ಲೆಕ್ಸ್ ಗಳನ್ನ ಹರಿದು ಹಾಕಿ ವಿಕೃತಿ ಮೆರೆದಿದ್ದಾರೆ.


ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದು ತಡರಾತ್ರಿ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಇಬ್ಬರು ಕೃತ್ಯ ಎಸಗಿರುವುದಾಗಿ ಮಾಹಿತಿ ಲಭಿಸಿದೆ.ಫ್ಲೆಕ್ಸ್ ಗಳನ್ನ ಸ್ಥಳೀಯ ನಗರಾಡಳಿತದಿಂದ ಅನುಮತಿ ಪಡೆಯದೆ ಅಳವಡಿಸಿರುವುದರಿಂದ ಈವರೆಗೂ ಯಾರೂ ಠಾಣೆಗೆ ದೂರು ನೀಡಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ.

Join Whatsapp