ಎದೆಗೆ ಆಯುಧದಿಂದ ಹೊಡೆದು ಯುವಕನ ಭೀಕರ ಕೊಲೆ

Prasthutha|

ಬೆಂಗಳೂರು: ಚನ್ನಪಟ್ಟಣದ ತಟ್ಟೆಕೆರೆ ತಮಿಳರ ಕಾಲೋನಿ ಬಳಿ ನಿನ್ನೆ ಮಧ್ಯರಾತ್ರಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ತಟ್ಟೆಕೆರೆಯ ಕುಮಾರ ಎಂಬುವರ ಪುತ್ರ ಪ್ರವೀಣ್ ಕೊಲೆಯಾದವರು. ಹಳೆಯ ದ್ವೇಷದ ಹಿನ್ನಲೆಯಲ್ಲಿ‌‌ ಪ್ರವೀಣ್ ‌ನ ಎದೆಯ ಭಾಗಕ್ಕೆ ಬಲವಾದ ಆಯುಧದಿಂದ ಹೊಡೆದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

- Advertisement -


ಸ್ಥಳಕ್ಕೆ ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಸಿಬ್ಬಂದಿ ಭೇಟಿ ನೀಡಿ‌ ಪರಿಶೀಲನೆ ನಡೆಸಿದ್ದಾರೆ. ನಗರ ವೃತ್ತ ನಿರೀಕ್ಷಕ ದಿವಾಕರ್ ಹಾಗೂ ಪೂರ್ವ ಪೊಲೀಸ್ ಠಾಣೆಯ ಪಿಎಸ್ಐ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಆರೋಪಿಗಳ ಪತ್ತೆಗೆ ಚನ್ನಪಟ್ಟಣ ಪೂರ್ವ ಠಾಣೆ ಪೊಲೀಸರು ಬಲೆ ಬೀಸಿದ್ದಾರೆ.

Join Whatsapp