ಎನ್ಡಿಎ ಮತ್ತೆ ಅಧಿಕಾರಕ್ಕೆ ಬಂದರೆ ‘ಒಂದು ರಾಷ್ಟ್ರ-ಒಂದು ಚುನಾವಣೆ’ ವ್ಯವಸ್ಥೆ ಜಾರಿ: ರಾಜನಾಥ್ ಸಿಂಗ್

Prasthutha|

ನವದೆಹಲಿ: ಎನ್ಡಿಎ ಮತ್ತೆ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ‘ಒಂದು ರಾಷ್ಟ್ರ-ಒಂದು ಚುನಾವಣೆ’ ವ್ಯವಸ್ಥೆಯನ್ನು ಜಾರಿಗೆ ತರುತ್ತೇವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

- Advertisement -

ಆಂಧ್ರಪ್ರದೇಶದ ಕಡಪ ಜಿಲ್ಲೆಯ ಜಮ್ಮಲಮಡುಗುನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಆಂಧ್ರಪ್ರದೇಶದಲ್ಲಿ ಎನ್ಡಿಎ) ಅಧಿಕಾರಕ್ಕೆ ಬಂದರೆ ರಾಜ್ಯವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸಲಾಗುವುದು. ಆಂಧ್ರಪ್ರದೇಶದಲ್ಲಿ ವಿಧಾನಸಭಾ ಚುನಾವಣೆಯ ಜೊತೆಗೆ ಲೋಕಸಭಾ ಚುನಾವಣೆಯೂ ನಡೆಯುತ್ತಿದೆ. ಮುಂದಿನ ಐದು ವರ್ಷಗಳಲ್ಲಿ ದೇಶಾದ್ಯಂತ ‘ಒಂದು ರಾಷ್ಟ್ರ-ಒಂದು ಚುನಾವಣೆ’ಯನ್ನು ಜಾರಿಗೆ ತರುವುದು ನಮ್ಮ ಬದ್ಧತೆಯಾಗಿದೆ, ಇದರಿಂದ ಸಮಯ ಮತ್ತು ಶಕ್ತಿಯನ್ನು ಉಳಿಸಬಹುದು ಎಂದು ಹೇಳಿದರು.

Join Whatsapp