ಒಡಿಶಾ: ದೋಣಿ ಮುಳುಗಿ ನಾಲ್ವರು ಸಾವು

Prasthutha|

ಝಾರ್ಸುಗುಡಾ: 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಮುಳುಗಿ ನಾಲ್ವರು ಸಾವನ್ನಪ್ಪಿರುವ ಘಟನೆಒಡಿಶಾದ ಝಾರ್ಸುಗುಡಾ ಜಿಲ್ಲೆಯ ಮಹಾನದಿಯಲ್ಲಿ ನಡೆದಿದೆ.

- Advertisement -

ನಾಪತ್ತೆಯಾದವರ ಪತ್ತೆಗಾಗಿ ಕಾರ್ಯಚರಣೆ ನಡೆಸಲಾಗುತ್ತಿದೆ ಎಂದು ಹೇಳಿದೆ. ಈ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿ ಚಿಂತಾಮಣಿ ಪ್ರಧಾನ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಬೋಟ್ ಬರ್ಗಢ್ ಜಿಲ್ಲೆಯ ಬಂಧಿಪಾಲಿ ಪ್ರದೇಶದಿಂದ ಪ್ರಯಾಣಿಕರನ್ನು ಸಾಗಿಸುತ್ತಿತ್ತು. ಈ ಸಮಯದಲ್ಲಿ ಅನೀರಿಕ್ಷಿತವಾಗಿ ನೀರಿನ ಮಟ್ಟ ಹೆಚ್ಚಾಗಿದೆ. ಇದರಿಂದ ದೋಣಿ ಜಾರ್ಸುಗುಡಾದ ಶಾರದಾ ಘಾಟ್ ಬಳಿ ಮುಳುಗಿದೆ ಎಂದು ಹೇಳಲಾಗಿದೆ.

Join Whatsapp