ಬಂಧಿತ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಗೆ 14 ದಿನ ನ್ಯಾಯಾಂಗ ಬಂಧನ

Prasthutha|

ಅಹಮದಾಬಾದ್: 2002 ರ ಗುಜರಾತ್ ನಲ್ಲಿ ನಡೆದ ಹತ್ಯಾಕಾಂಡದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಸಾಕ್ಷಿ ಮತ್ತು ಆಧಾರಗಳನ್ನು ಸೃಷ್ಟಿಸಿದ್ದಾರೆಂಬ ಆರೋಪದಲ್ಲಿ ಬಂಧನದಲ್ಲಿರುವ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಹಾಗೂ ಮಾಜಿ ಪೊಲೀಸ್ ಮಹಾನಿರ್ದೇಶಕ ಆರ್ ಬಿ ಶ್ರೀಕುಮಾರ್ ಅವರಿಗೆ ಅಹಮದಾಬಾದ್ ನ ಮೆಟ್ರೋಪೋಲಿಟನ್ ನ್ಯಾಯಾಲಯವು 14 ದಿನದ ನ್ಯಾಯಾಂಗ ಬಂಧನ ಆದೇಶ ನೀಡಿದೆ.

- Advertisement -

‘ತನಿಖಾ ತಂಡವು ಹೆಚ್ಚಿನ ದಿನಗಳವರೆಗೆ ಕಸ್ಟಡಿಗೆ ನೀಡಬೇಕೆಂದು ಕೋರಲಿಲ್ಲ. ಆದ್ದರಿಂದ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ’ ಎಂದು ಮೆಟ್ರೋಪೋಲಿಟನ್ ಪ್ರಾಸಿಕ್ಯೂಟರ್ ಅಮಿತ್ ಪಟೇಲ್ ಆದೇಶಿಸಿದ್ದಾರೆ.

ಅಹಮದಾಬಾದ್ ಪೊಲೀಸ್ ಅಪರಾಧ ವಿಭಾಗವು ದಾಖಲಿಸಿದ ಎಫ್ ಐ ಆರ್ ಮೇಲೆ ತೀಸ್ತಾ ಸೆಟಲ್ವಾಡ್ ಮತ್ತು ಶ್ರೀಕುಮಾರ್ ಅವರನ್ನು ಬಂಧಿಸಲಾಗಿತ್ತು. ‘ಗಲಭೆಯ ತನಿಖಾಧಿಕಾರಿಗಳಿಗೆ ಸುಳ್ಳು ಸಾಕ್ಷಿಗಳನ್ನು ನೀಡಿ , ತನಿಖೆಯ ದಾರಿತಪ್ಪಿಸುತ್ತಿದ್ದರು’ ಎಂದು ಎಫ್ ಐ ಆರ್ ನಲ್ಲಿ ದಾಖಲಿಸಿದ್ದರು.

Join Whatsapp