ಕನ್ಹಯ್ಯಾ ಲಾಲ್ ಹತ್ಯೆ ಆರೋಪಿಗಳು10 ದಿನಗಳ ಕಾಲ ಎನ್ ಐ ಎ ಕಸ್ಟಡಿಗೆ

Prasthutha|

ಜೈಪುರ್: ನೂಪುರ್ ಶರ್ಮಾ ಹೇಳಿಕೆಯನ್ನು ಬೆಂಬಲಿಸಿದ ಕಾರಣ ಕನ್ಹಯ್ಯಾ ಲಾಲ್ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್ ಐ ಎ) 10 ದಿನಗಳ ಕಾಲ ವಶಕ್ಕೆ ಪಡೆದಿದೆ.

- Advertisement -

ಜೈಪುರ ನ್ಯಾಯಾಲಯವು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೆ ಬಂಧಿತರಾದ ನಾಲ್ವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್ಐಎ) 10 ದಿನಗಳ ಕಾಲ ಒಪ್ಪಿಸಿದೆ.

ಆರೋಪಿಗಳನ್ನು ಮುಹಮ್ಮದ್ ರಿಯಾಜ್ , ಘೌಸ್ ಮುಹಮ್ಮದ್, ಆಸಿಫ್ ಹುಸೇನ್ ಮತ್ತು ಮೊಹ್ಸಿನ್ ಖಾನ್ ಎಂದು ಗುರುತಿಸಲಾಗಿದೆ. ನಾಲ್ವರನ್ನು ಇಂದು ಮಧ್ಯಾಹ್ನ ಜೈಪುರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಕೋರ್ಟ್ ಆವರಣದಲ್ಲಿ ಆರೋಪಿಗಳ ಮೇಲೆ ಅಲ್ಲಿ ಸೇರಿದ್ದ ಜನರು ಹಲ್ಲೆಯನ್ನು ಮಾಡಿದ್ದರು.

- Advertisement -

ಮುಹಮ್ಮದ್ ರಿಯಾಜ್ ಮತ್ತು ಘೌಸ್ ಮುಹಮ್ಮದ್ ಎಂಬಾತರು ಜೂನ್ 28 ರಂದು, ಪ್ರವಾದಿಯ ಬಗ್ಗೆ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ಹೇಳಿಕೆಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕಾಗಿ ಕನ್ಹಯ್ಯಾರನ್ನು ಕತ್ತು ಸೀಳಿ ಹತ್ಯೆ ಮಾಡಿದ್ದರು.

Join Whatsapp