ಕರಾವಳಿ, ಮಲೆನಾಡಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ : ಆರೆಂಜ್ ಅಲೆರ್ಟ್ ಘೋಷಣೆ

Prasthutha|

ಬೆಂಗಳೂರು: ಕರಾವಳಿ ಮತ್ತು ಮಲೆನಾಡಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲೆರ್ಟ್ ಘೋಷಿಸಲಾಗಿದೆ.

- Advertisement -

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಯಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲೆರ್ಟ್ ಘೋಷಿಸಿದೆ.

ಮುಂದಿನ ನಲ್ವತ್ತೆಂಟು ಗಂಟೆ ರಾಜ್ಯದ ನಾನಾಕಡೆ ಧಾರಾಕಾರ ಮಳೆಯಾಗಲಿಕ್ಕಿದ್ದು, ಹಾಸನ, ಹಾವೇರಿ, ಕಲಬುರ್ಗಿ, ವಿಜಯಪುರ, ಬೆಳಗಾವಿ ,ಗದಗ ಮತ್ತು ಧಾರವಾಡದಲ್ಲಿ ‘ಯೆಲ್ಲೋ ಅಲೆರ್ಟ್’ ಘೋಷಿಸಲಾಗಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

Join Whatsapp