ಕಾಟಿಪಳ್ಳದಲ್ಲಿ ಪಿಂಕಿ ನವಾಝ್ ಮೇಲೆ ದುಷ್ಕರ್ಮಿಗಳಿಂದ ತಲವಾರು ದಾಳಿ

Prasthutha|

ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ಆರೋಪಿ ಪಿಂಕಿ ನವಾಝ್ ನ ಕೊಲೆ ಯತ್ನ ನಡೆದಿದೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ನವಾಝ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಪರಾರಿಯಾಗಿದೆ.
ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಕಾಟಿಪಳ್ಳ 2ನೇ ಬ್ಲಾಕ್ ಬಳಿ ಬುಧವಾರ ಸಂಜೆ ಈ ದಾಳಿ ನಡೆದಿದೆ. ದಾಳಿಯಿಂದ ಗಂಭೀರ ಗಾಯಗೊಂಡ ಪಿಂಕಿ ನವಾಝ್ ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರಿನಲ್ಲಿ ಬಂದ ಆರು ಜನರ ತಂಡದಿಂದ ಈ ದಾಳಿ ನಡೆದಿದೆ ಎನ್ನಲಾಗಿದೆ. ಶಾಕಿಬ್ ಅಲಿಯಾಸ್ ಶಾಬು ಎಂಬಾತನ ಗ್ಯಾಂಗ್ ನಿಂದ ಈ ಕೊಲೆ ಯತ್ನ ನಡೆದಿದೆ ಎನ್ನಲಾಗಿದೆ. ಇತ್ತೀಚೆಗೆ ಶಾಬು ಗ್ಯಾಂಗ್ ಜೊತೆ ಪಿಂಕಿ ನವಾಜ್ ಮನಸ್ತಾಪ ಹೊಂದಿದ್ದ ಎಂದು ಮೂಲಗಳು ತಿಳಿಸಿವೆ. ವಿಷಯ ತಿಳಿದ ತಕ್ಷಣ ಸುರತ್ಕಲ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ.

Join Whatsapp