ಕಾಫಿ ಉದ್ಯಮದಲ್ಲಿ ನಷ್ಟ: ಯುವ ಉದ್ಯಮಿ ಶಕೀರ್ ಅಹ್ಮದ್ ನೇಣಿಗೆ ಶರಣು

Prasthutha|

ಬೆಂಗಳೂರು, ಆ,3 : ಕಾಫಿ ಉದ್ಯಮದಲ್ಲಿ 1 ಕೋಟಿ ರೂಪಾಯಿ ನಷ್ಟ ಸಂಭವಿಸಿದ್ದರಿಂದ ಮನನೊಂದು ಯುವ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

- Advertisement -

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ನಿವಾಸಿ ಶಕೀರ್ ಅಹ್ಮದ್ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ. ನೆಲಮಂಗಲ ನಗರದ ಕುಣಿಗಲ್ ವೃತ್ತದ ವಜ್ರೇಶ್ವರಿ ಲಾಡ್ಜ್​​​ ನಲ್ಲಿ ಅವರು ನೇಣಿಗೆ ಶರಣಾಗಿದ್ದಾರೆ.

ಜುಲೈ 13 ರಂದು ಶಕೀರ್ ಕಾಣೆಯಾಗಿರುವುದಾಗಿ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಜುಲೈ 29 ರಿಂದ ವಜ್ರೇಶ್ವರಿ ಲಾಡ್ಜ್ ​​ನಲ್ಲಿ ರೂಂ ಪಡೆದು ಶಕೀರ್ ತಂಗಿದ್ದರು. ಪ್ರತಿದಿನ ಊಟ ಕೊಡಲು ರೂಂಗೆ ಹೋಗುತ್ತಿದ್ದ ಲಾಡ್ಜ್​ ಸಿಬ್ಬಂದಿ, ನಿನ್ನೆ (ಸೋಮವಾರ) ಮಧ್ಯಾಹ್ನ ಹೋದಾಗ ಶಕೀರ್ ಬಾಗಿಲು ತೆಗೆಯಲಿಲ್ಲ. ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

- Advertisement -

ನೆಲಮಂಗಲ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Join Whatsapp