Home ರಾಜ್ಯ ಕೆಎಸ್ ಆರ್ ಟಿಸಿ ಬಸ್-ಕಾರು ಮುಖಾಮುಖಿ ಡಿಕ್ಕಿ; ಪಿಎಸ್ ಐ ಸೇರಿ ನಾಲ್ವರ ಸಾವು

ಕೆಎಸ್ ಆರ್ ಟಿಸಿ ಬಸ್-ಕಾರು ಮುಖಾಮುಖಿ ಡಿಕ್ಕಿ; ಪಿಎಸ್ ಐ ಸೇರಿ ನಾಲ್ವರ ಸಾವು

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಚಡಿ ಕ್ರಾಸ್ ಬಳಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳಾ ಪಿಎಸ್ಐ ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಳಗಾವಿ ಮಹಿಳಾ ಪೊಲೀಸ್ ಠಾಣೆಯ ಪಿಎಸ್ಐ ಲಕ್ಷ್ಮೀ ಪವಾರ್, ಪ್ರಸಾದ್ ಪವಾರ್, ಅಂಕಿತಾ ಪವಾರ್ ಹಾಗೂ ದೀಪಾ ಶಹಾಪುರಕರ್ ಮೃತಪಟ್ಟಿದ್ದಾರೆ.
ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರೆಲ್ಲರೂ ಬೆಳಗಾವಿಯ ಸಹ್ಯಾದ್ರಿ ನಗರದ ನಿವಾಸಿಗಳಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಸಂಬಂಧಿಕರ ಮನೆಗೆ ಹೋಗಿ ಕಾರಿನಲ್ಲಿ ಬೆಳಗಾವಿಗೆ ವಾಪಸ್ ಆಗುತ್ತಿದ್ದಾಗ ಚಚಡಿ ಕ್ರಾಸ್ ಬಳಿ ಈ ದುರಂತ ಸಂಭವಿಸಿದೆ. ಸರ್ಕಾರಿ ಬಸ್ ಬೆಳಗಾವಿಯಿಂದ ಯರಗಟ್ಟಿಯತ್ತ ಹೊರಟಿತ್ತು ಎನ್ನಲಾಗಿದೆ.
ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅಲ್ಲದೇ ಕಾರು ಬಸ್ ಅಡಿಯಲ್ಲಿ ಸಿಲುಕಿದ್ದು, ನಂತರ ಕ್ರೇನ್ ಸಹಾಯದ ಮೂಲಕ ಕಾರು ಹೊರ ತೆಗೆದು, ಶವಗಳನ್ನು ಹೊರ ತೆಗೆಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp
Exit mobile version