‘ಕೈ’ ಕೊಟ್ಟು ಬಿಜೆಪಿ ಸೇರಿದ ಮಂಗಳೂರಿನ ಮಾಜಿ ಮೇಯರ್ ಕವಿತಾ ಸನಿಲ್

Prasthutha|

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್, ಕಾಂಗ್ರೆಸ್ ನಾಯಕಿ ಕವಿತಾ ಸನಿಲ್ ಶನಿವಾರ ಬಂಟ್ವಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.

- Advertisement -

ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿದ ಕವಿತಾ ಸನಿಲ್, ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ನಾನು ಪಕ್ಷ ಸೇರ್ಪಡೆಯಾಗಿದ್ದೇನೆ. ನನ್ನ ರಾಜಕೀಯ ಗುರು ಜನಾರ್ದನ ಪೂಜಾರಿ ಆಶೀರ್ವಾದ ಪಡೆದು ಇಲ್ಲಿ ಬಂದಿದ್ದೇನೆ ಎಂದರು. ಕಳೆದ ಕೆಲವು ತಿಂಗಳಲ್ಲಿ ಕೊಲೆ ಸರಣಿಯೇ ಆಗಿಹೋಗಿದೆ. ಇದು ಇವರ ಆಡಳಿತ ಸ್ಥಿತಿ. ಅಯೋಧ್ಯೆಯಲ್ಲಿ ರಾಮ ಮಂದಿರ ಆಗಿರೋದು ನಮ್ಮೆಲ್ಲರ ಭಾಗ್ಯ. ಈ ಸಲದ ಚುನಾವಣೆ ಮೋದಿಗಾಗಿ ಕೊಡುವ ಮತ ಅಲ್ಲ. ರಾಮನಿಗಾಗಿ ಕೊಡುವ ಮತ. ಈ ಬಾರಿ ಅತಿ ಹೆಚ್ಚು ಮತಗಳಿಂದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರನ್ನು ನಾವು ಗೆಲ್ಲಿಸಬೇಕಾಗಿದೆ ಎಂದರು.‌

Join Whatsapp