ಕೊಣಾಜೆ: ಸಿಡಿಲು ಬಡಿದು ಯುವಕ ಮೃತ್ಯು

Prasthutha|

- Advertisement -

ಕೊಣಾಜೆ: ಗದ್ದೆಯಲ್ಲಿ ಕಟ್ಟಿದ್ದ ದನವನ್ನು ಬಿಡಿಸಿಕೊಂಡು ಮನೆಯತ್ತ ಬರುವ ವೇಳೆ ಸಿಡಿಲು ಬಡಿದಿದು ಯುವಕ ಮೃತಪಟ್ಟಿರುವ ಘಟನೆ ಹರೇಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾನದಬೆಟ್ಟು ಎಂಬಲ್ಲಿ ಇಂದು ಸಂಜೆ ನಡೆದಿದೆ.

ಹಸನಬ್ಬ ಎಂಬವರ ಪುತ್ರ ಅಬ್ದುಲ್ ರಹ್ಮಾನ್ (33) ಸಿಡಿಲು ಬಡಿದು ಮೃತಪಟ್ಟರು.

- Advertisement -

ಸಿಡಿಲು ಬಡಿದ ಆತನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅವರು ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.

ರಹ್ಮಾನ್ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Join Whatsapp