ಕೊರೋನಾ ಮೂರನೇ ಅಲೆ: ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ !

Prasthutha|

ಬೆಂಗಳೂರು:  ಕಳೆದೆರಡು ಕೊರೋನಾ ಅಲೆಗಳಿಗೆ ಹೋಲಿಸಿದರೆ ಮೂರನೇ ಅಲೆಯ ತೀವ್ರತೆ ಕಡಿಮೆ ಎಂದು ಹೇಳಲಾಗಿದ್ದು,  ಇಂದು ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ಕರೆದಿದ್ದಾರೆ.

- Advertisement -

ವೀಕೆಂಡ್ ಕರ್ಫ್ಯೂ ರದ್ದುಪಡಿಸಿದ್ದ ಸರ್ಕಾರ ಇದೀಗ ಫೆಬ್ರವರಿ ಒಂದರಿಂದ ಮತ್ತಷ್ಟು ನಿರ್ಬಂಧ ಸಡಿಲಿಕೆ ಮಾಡಲಿದೆಯೇ ಎಂಬ ಮಾತುಗಳು ಕೇಳಿಬರುತ್ತಿದೆ. ಸದ್ಯ ಕಠಿಣ ನಿಯಮಗಳನ್ನು ಸರ್ಕಾರ ಜಾರಿಗೆ ತಂದಿಲ್ಲ. ಕೇವಲ ನೈಟ್ ಕರ್ಫ್ಯೂ ಮತ್ತು 50:50 ರೂಲ್ಸ್ ಜಾರಿಯಲ್ಲಿದೆ.

ಈ ನಿಯಮವನ್ನು ಕೂಡ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸದಸ್ಯರು ತಜ್ಞರೊಂದಿಗೆ ಚರ್ಚಿಸಿ ರದ್ದುಪಡಿಸುವ ತೀರ್ಮಾನಕ್ಕೆ ಬರಲಿದೆಯೇ ಎಂಬ ಮಾತುಗಳು ಕೇಳಿಬರುತ್ತಿದೆ.

- Advertisement -

ಸಭೆಯಲ್ಲಿ ಆರೋಗ್ಯ ಸಚಿವರು, ಕಂದಾಯ ಸಚಿವರು, ಗೃಹ ಸಚಿವರು, ಉನ್ನತ ಶಿಕ್ಷಣ ಸಚಿವರು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು, ಇಲಾಖಾ ಕಾರ್ಯದರ್ಶಿಗಳು, ಸರ್ಕಾರದ ಮುಖ್ಯ ಕಾರ್ಯದರ್ಶಿ, ಬಿಬಿಎಂಪಿ ಆಯುಕ್ತ, ಹಿರಿಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಲಿದ್ದಾರೆ.

Join Whatsapp