ಕೊರೋನ ಸಂಕಷ್ಟ | ಉಡುಪಿಯಲ್ಲಿ ಮೀನುಗಾರಿಕೆಗೆ ಕಾರ್ಮಿಕರ ಕೊರತೆ

Prasthutha|

ಉಡುಪಿ : ಜಿಲ್ಲೆಯಲ್ಲಿ ಮೀನುಗಾರಿಕೆಯ ಕಾಲ ಆರಂಭವಾಗಿದೆ. ಯಾಂತ್ರೀಕೃತ ದೋಣಿಗಳಿಗೆ ಮೀನುಗಾರಿಕೆಗೆ ಅವಕಾಶವಿದ್ದರೂ, ಕೊರೋನ ಸೋಂಕಿನ ಹಿನ್ನೆಲೆಯಲ್ಲಿ, ಮೀನುಗಾರರು ಭಯದಿಂದ ಸಮುದ್ರಕ್ಕೆ ಕಾಲಿಡುತ್ತಿಲ್ಲ ಎನ್ನಲಾಗಿದೆ. ಹೀಗಾಗಿ ಈ ಬಾರಿ ಮೀನುಗಾರಿಕೆ ಸಂಕಷ್ಟದಲ್ಲಿದೆ ಎಂದು ತಿಳಿದು ಬಂದಿದೆ.

- Advertisement -

ಮಲ್ಪೆ ಮೀನುಗಾರಿಕೆ ಬಂದರಿನಿಂದ 1,700ಕ್ಕೂ ಹೆಚ್ಚು ಯಾಂತ್ರೀಕೃತ ದೋಣಿಗಳು ಕಾರ್ಯ ನಿರ್ವಹಿಸುತ್ತಿವೆ. ಹೊರಗಿನ ಜಿಲ್ಲೆಗಳು ಮತ್ತು ರಾಜ್ಯಗಳ ಕಾರ್ಮಿಕರು ಸೇರಿದಂತೆ ಸಾವಿರಾರು ಜನರು ಇಲ್ಲಿ ಮೀನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಇವರಲ್ಲಿ ಯಾರಿಗಾದರೂ ಕೊರೋನ ವೈರಸ್ ಸೋಂಕು ತಗುಲಿದರೆ, ಇಡೀ ಮೀನುಗಾರಿಕಾ ವ್ಯವಹಾರಕ್ಕೆ ಭಾರಿ ತೊಂದರೆಯಾಗುತ್ತದೆ ಎಂದು ಮೀನುಗಾರರು ಹೆದರುತ್ತಿದ್ದಾರೆ. ಈಗಾಗಲೇ ತೊಂದರೆಯಲ್ಲಿರುವ ಮೀನುಗಾರರು ಇನ್ನಷ್ಟು ತೊಂದರೆಗಳನ್ನು ಎದುರಿಸಲು ಸಿದ್ಧರಿಲ್ಲ ಎಂದು ಮೀನುಗಾರಿಕಾ ಒಕ್ಕೂಟದ ನಾಯಕರು ಹೇಳುತ್ತಿದ್ದಾರೆ.

ಕಳೆದ ಎರಡು ವರ್ಷಗಳಿಂದ ಮೀನುಗಾರಿಕೆ ಉದ್ಯಮವು ಗಂಭೀರ ಸಮಸ್ಯೆಯನ್ನು ಎದುರಿಸುತ್ತಿದೆ. ಲಾಕ್ ಡೌನ್ ಅವಧಿಯಲ್ಲಿ ಆದಾಯವಿಲ್ಲದೆ, ದೋಣಿ ಮಾಲಿಕರಿಗೆ ಸಾಲ ಕಟ್ಟಲು ಆಗುತ್ತಿಲ್ಲ. ಹೆಚ್ಚು ಕೆಲಸ ಇಲ್ಲದ ಕಾರಣ ಹೊರಗಿನ ಕಾರ್ಮಿಕರು ತಮ್ಮ ತವರೂರಿಗೆ ಹಿಂದಿರುಗಿದ್ದಾರೆ. ಈ ವರ್ಷ ಮೀನುಗಾರಿಕೆ ಉದ್ಯಮವು ಸರಿಯಾಗಿ ಕೆಲಸ ಮಾಡಿಲ್ಲ ಎಂದು ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಕೃಷ್ಣ ಸುವರ್ಣ ಹೇಳಿದ್ದಾರೆ.

Join Whatsapp