ಗುಜರಾತ್ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರದು: ಎಚ್.ಡಿ.ಕುಮಾರಸ್ವಾಮಿ

Prasthutha|

ಕಲಬುರಗಿ: ಗುಜರಾತ್ ಫಲಿತಾಂಶ ನನಗೇನು ಅಚ್ಚರಿ ಉಂಟು ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

- Advertisement -

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗುಜರಾತಿನ ಫಲಿತಾಂಶ ಅಚ್ಚರಿ ಮೂಡಿಸುವ ಫಲಿತಾಂಶ ಅಲ್ಲ. ಈ ಚುನಾವಣೆ ಪೂರ್ವದಲ್ಲೇ  ಅಲ್ಲಿ ವಿಪಕ್ಷಗಳ ಶಕ್ತಿ ಕುಂಠಿತವಾಗಿತ್ತು ಎಂದರು.

ಗುಜರಾತ್ ನಲ್ಲಿ ವಿಪಕ್ಷಗಳು ಇಲ್ಲದ ಕಾರಣ ಜನತೆ ಇಂತಹ ತೀರ್ಮಾನ ಕೈಗೊಂಡಿದ್ದಾರೆ. ನನ್ನ ಪ್ರಕಾರ ನಿರೀಕ್ಷಿತ ಫಲಿತಾಂಶ ಬಂದಿದೆ. ಇದರಿಂದ ಅಚ್ಚರಿ ಏನೂ ಆಗಿಲ್ಲ. ಗುಜರಾತ್ ಚುನಾವಣೆ ಫಲಿತಾಂಶ ಕರ್ನಾಟಕ ಮೇಲೆ ಪರಿಣಾಮ ಬಿರಲ್ಲ ಎಂದು ಹೇಳಿದರು.

- Advertisement -

ಗುಜರಾತ್ ಫಲಿತಾಂಶ ಇಟ್ಟುಕೊಂಡು ಇವರು ರಾಜ್ಯಕ್ಕೆ ಬಂದು ಹೇಗೆ ಮತ ಕೇಳುತ್ತಾರೆ ಎಂದು ಕೇಳಿದ ಹೆಚ್ ಡಿ ಕೆ, ಇವರು ರಾಜ್ಯದಲ್ಲಿ ಏನ್ ಕೆಲಸ ಮಾಡಿದ್ದಾರೆ ಅಂತ ಗುಜರಾತ್ ಹೆಸರು ಹೇಳಿ ಓಟ್ ಕೇಳ್ತಾರೆ? ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದು ಬಿಜೆಪಿ ಮಕಾಡೆ ಮಲಗಿದೆ. ಮಕಾಡೆ ಮಲಗೋದು ಎದ್ದೇಳೋದು ಆ ಪಕ್ಷಗಳ ಸಂಘಟನೆ ಮೇಲೆ ಅವಲಂಬಿಸಿರುತ್ತದೆ ಎಂದು ಹೇಳಿದರು.

ಗುಜರಾತ್ ಫಲಿತಾಂಶ ಬೀರುತ್ತೆ ಎಂದು ಸಿಎಂ ಬೊಮ್ಮಾಯಿ ಹೇಳಿಕೆ ಸರಿಯಲ್ಲ. ಅಖಾಡಕ್ಕೆ ಇಳಿದಾಗ ಯಾರು ಏನು ಅನ್ನೋದು ತಿಳಿಯಲಿದೆ ಎಂದು ಹೇಳಿದರು

Join Whatsapp