ಗ್ಯಾರಂಟಿ ಬಗ್ಗೆ ಅಪಪ್ರಚಾರ: ಕುಮಾರಸ್ವಾಮಿ, ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ದೂರು

Prasthutha|

ಬೆಂಗಳೂರು: ಚುನಾವಣೆ ಬಳಿಕ ಕಾಂಗ್ರೆಸ್ನ ಗ್ಯಾರಂಟಿಗಳು ನಿಲ್ಲುತ್ತದೆ ಎಂಬ ಬಿಜೆಪಿ-ಜೆಡಿಎಸ್ ಪ್ರಚಾರದ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧ ಕಾಂಗ್ರೆಸ್ ದೂರು ನೀಡಿದೆ.

- Advertisement -


ರಾಜ್ಯ ಸರ್ಕಾರದ ಗ್ಯಾರಂಟಿ ಬಗ್ಗೆ ವಿಪಕ್ಷಗಳು ಅಪಪ್ರಚಾರ ಮಾಡುತ್ತಿವೆ. ಈ ಹಿನ್ನಲೆ ಬಿಜೆಪಿ, ಜೆಡಿಎಸ್ ನಾಯಕರಾದ ಹೆಚ್ ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಕಾಂಗ್ರೆಸ್ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು ದೂರು ನೀಡಿದ್ದಾರೆ.

Join Whatsapp