Home ಟಾಪ್ ಸುದ್ದಿಗಳು ತೀರ್ಥಹಳ್ಳಿ ಪಟ್ಟಣ ಪಂಚಾಯತ್‌ ನಲ್ಲಿ 25 ವರ್ಷಗಳ ಬಳಿಕ ಕಾಂಗ್ರೆಸ್ ಗೆ ಐತಿಹಾಸಿಕ ವಿಜಯ

ತೀರ್ಥಹಳ್ಳಿ ಪಟ್ಟಣ ಪಂಚಾಯತ್‌ ನಲ್ಲಿ 25 ವರ್ಷಗಳ ಬಳಿಕ ಕಾಂಗ್ರೆಸ್ ಗೆ ಐತಿಹಾಸಿಕ ವಿಜಯ

ಶಿವಮೊಗ್ಗ : ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ತೀರ್ಥಹಳ್ಳಿ ಪಟ್ಟಣ ಪಂಚಾಯತ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ. ಸುಮಾರು 25 ವರ್ಷಗಳ ಬಿಜೆಪಿಯ ಆಡಳಿತ ಈ ಮೂಲಕ ಕೊನೆಗೊಂಡಿದೆ. ಪಟ್ಟಣ ಪಂಚಾಯತಿಯ 15 ವಾರ್ಡ್ ಗಳ ಪೈಕಿ 9 ವಾರ್ಡ್ ಗಳಲ್ಲಿ ಕಾಂಗ್ರೆಸ್ ಪಕ್ಷ ಗೆದ್ದು ಸ್ಪಷ್ಟ ಬಹುಮತಗಳಿಸಿದೆ.

15 ವಾರ್ಡ್ ಗಳ ಪೈಕಿ ಬಿಜೆಪಿ ಕೇವಲ 6 ವಾರ್ಡ್ ಗಳಲ್ಲಿ ಮಾತ್ರ ಗೆದ್ದಿದೆ. ಕಳೆದ ಸುಮಾರು 25 ವರ್ಷದಿಂದ ನಿರಂತರವಾಗಿ ತೀರ್ಥಹಳ್ಳಿ ಪಟ್ಟಣ ಪಂಚಾಯತ್ ಅಧಿಕಾರ ಚುಕ್ಕಾಣಿ ಹಿಡಿದಿದ್ದು. ಆದರೆ ಈ ಬಾರಿ ಜನರು ಬಿಜೆಪಿಯನ್ನು ಜನರು ತಿರಸ್ಕರಿಸಿದ್ದು ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದೆ.

ಪಟ್ಟಣ ಪಂಚಾಯತ್  ಅಧಿಕಾರವನ್ನು ಹಿಡಿಯಲೇ ಬೇಕೆಂದು ಬಿಜೆಪಿಯ ಘಟಾನು ಘಟಿ ನಾಯಕರಾದ ಸಚಿವ ಕೆ.ಎಸ್ ಈಶ್ವರಪ್ಪ , ಸಂಸದ ರಾಘವೇಂದ್ರ ಮತ್ತು ಶಾಸಕ ಅರಗ ಜ್ಞಾನೇಂದ್ರ ಅವರು ನಿರಂತರ ಚುನಾವಣಾ ಪ್ರಚಾರ ನಡೆಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

ಕಾಂಗ್ರೆಸ್ ನಿಂದ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಇತ್ತೀಚ್ಚೆಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ಆರ್.ಎಂ ಮಂಜುನಾಥ್ ಹಾಗೂ ಜಿಲ್ಲಾಧ್ಯಕ್ಷ ಹೆಚ್ ಎಸ್ ಸುಂದರೇಶ್ ಒಗ್ಗಟ್ಟಿನಿಂದ ಭರ್ಜರಿ ಪ್ರಚಾರ ನಡೆಸಿ ಪಟ್ಟಣ ಪಂಚಾಯತ್ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

Join Whatsapp
Exit mobile version