ದಮ್ಮಾಮ್: ಐ.ಎಸ್.ಎಫ್ ವತಿಯಿಂದ ಸರಕಾರಿ ಯೋಜನೆಗಳ ಕುರಿತು ವೆಬಿನಾರ್

Prasthutha|

ದಮ್ಮಾಮ್: ತನ್ನ ಸದಸ್ಯರಲ್ಲಿ ವಿವಿಧ ಸರ್ಕಾರಿ ಯೋಜನೆಗಳ ಕುರಿತು ಅರಿವುಂಟುಮಾಡುವ ಉದ್ದೇಶದಿಂದ  ಇಂಡಿಯನ್ ಸೊಶಿಯಲ್ ಫೋರಂ, ದಮ್ಮಾಮ್, ಕರ್ನಾಟಕ ರಾಜ್ಯದ ವತಿಯಿಂದ ತರಬೇತಿ ಕಾರ್ಯಕ್ರಮವನ್ನು ವಿಡಿಯೋ ಕಾನ್ಫರೆನ್ಸ್‌ ಮೂಲಕ ಆಯೋಜಿಸಲಾಗಿತ್ತು.

- Advertisement -

ಇನ್ಫಾರ್ಮೇಶನ್ ಫೌಂಡೇಶನ್ ನ ನಿರ್ದೇಶಕ ಅಬ್ದುಲ್ ಖಾದರ್ ನಾವೂರು ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದು, ಸರಕಾರದ ವಿವಿಧ ಯೋಜನೆಗಳು ಮತ್ತು ಅವುಗಳನ್ನು ಸದುಪಯೋಗಪಡಿಸುವ ಕುರಿತು ಮಾಹಿತಿ ನೀಡಿದರು.

ಸುಮಾರು 40 ಮಂದಿ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ನೌಶಾದ್ ಬೋಳಾರ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಇಂಡಿಯನ್ ಸೋಶಿಯಲ್ ಫೋರಂ ದಮ್ಮಾಮ್ ಕರ್ನಾಟಕ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಇಮ್ರಾನ್ ಕಾಟಿಪಳ್ಳ ವಂದಿಸಿದರು.

Join Whatsapp