ದೆಹಲಿ | ರೈತಪ್ರತಿಭಟನೆಯಲ್ಲಿ ಖಲೀಸ್ತಾನಿ ಕರಪತ್ರ ಹಂಚುತ್ತಿದ್ದ ಆರೆಸ್ಸೆಸ್ ಕಾರ್ಯಕರ್ತನ ಬಂಧನ

Prasthutha|

ಕೇಂದ್ರ ಸರಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ದಿಕ್ಕು ತಪ್ಪಿಸುವ ಸಲುವಾಗಿ ಖಲೀಸ್ತಾನಿ ಕರಪತ್ರ ಮತ್ತು ಸ್ಕಿಕರ್ ಗಳನ್ನು ಹಂಚುತ್ತಿದ್ದ ಆರೆಸ್ಸೆಸ್ ಕಾರ್ಯಕರ್ತನನ್ನು ಪ್ರತಿಭಟನಾನಿರತ ರೈತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

- Advertisement -

ರೈತ ಹೋರಾಟವನ್ನು ದಿಕ್ಕುತಪ್ಪಿಸಲು ಕೇಂದ್ರ ಬಿಜೆಪಿ ಸರಕಾರ, ಆರೆಸ್ಸೆಸ್ ಹಾಗೂ ಬಲಪಂಥೀಯ ಮಾಧ್ಯಮಗಳು ಪ್ರಯತ್ನಿಸುತ್ತಿವೆ ಎಂದು ರೈತರು ಆಪಾದಿಸಿದ್ದಾರೆ.

ಪ್ರತಿಭಟನಾನಿರತ ರೈತರನ್ನು ಭಯೋತ್ಪಾದಕರು, ಖಲೀಸ್ತಾನಿಗಳು, ನಕ್ಸಲೈಟ್‌ಗಳು ಎಂದು ಬಿಂಬಿಸುವಲ್ಲಿ ಬಿಜೆಪಿ ಐಟಿ ಸೆಲ್ ನ ಪಾತ್ರ ಬಹಳಷ್ಟಿದೆ ಎಂದು ದೂರಿದರು.

Join Whatsapp