ನನಗೆ ಜೀವ ಬೆದರಿಕೆ ಇತ್ತು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್

Prasthutha|

- Advertisement -

ಮಂಡ್ಯ: ನನಗೆ ಜೀವ ಬೆದರಿಕೆ ಇದ್ದರೂ ನಾನು ಹೋರಾಡಿದ್ದೇನೆ. ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಡಿದ್ದಕ್ಕೆ ಬೆದರಿಕೆ ಕರೆ ಮಾಡಿದ್ದರು ಎಂದು ಸಂಸದೆ ಸುಮಲತಾ ಅಂಬರೀಶ್ ​ ಹೇಳಿದ್ದಾರೆ.

ನಗರದ ಜಿಲ್ಲಾ ಪಂಚಾಯತ್‌ ಕಾವೇರಿ ಭವನದಲ್ಲಿ ಆಯೋಜಿಸಿದ್ದ ತಮ್ಮ ಅಧಿಕಾರ ಅವಧಿಯ ಕೊನೆ ದಿಶಾ ಸಭೆಯಲ್ಲಿ ಮಾತನಾಡಿದ ಅವರು, ನನಗೆ ನಿರಂತರವಾಗಿ ಜೀವ ಬೆದರಿಕೆ ಕರೆ ಬರುತ್ತಿದ್ದವು. ಕೆಆರ್​ಎಸ್​ ಉಳಿವಿಗಾಗಿ ಅಕ್ರಮದ ವಿರುದ್ಧ ಹೋರಾಡಿದ್ದೇನೆ. ಹೋರಾಟದ ಫಲವಾಗಿ ಹೈಕೋರ್ಟ್ ಗಣಿಗಾರಿಕೆ ನಿಷೇಧಿಸಿದೆ ಎಂದು ಹೇಳಿದ್ದಾರೆ.

Join Whatsapp