ನೇಪಾಳ ಪೊಲೀಸರ ಗುಂಡಿಗೆ ಭಾರತೀಯ ಬಲಿ

Prasthutha|

- Advertisement -

ಪಿಲಿಭಿತ್ (ಉತ್ತರಪ್ರದೇಶ): ಗಡಿಯಲ್ಲಿ ನೇಪಾಳ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಗಾಯಗೊಂಡ ಭಾರತದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿರುವುದಾಗಿ ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

ಮೃತ ವ್ಯಕ್ತಿಯನ್ನು ಗೋವಿಂದ (26) ಎಂದು ಗುರುತಿಸಲಾಗಿದೆ. ಅವರು, ಪಪ್ಪು ಸಿಂಗ್‌ ಮತ್ತು ಗುರ್ಮೀತ್‌ ಸಿಂಗ್‌ ಎನ್ನುವವರೊಂದಿಗೆ ನೇಪಾಳಕ್ಕೆ ಪ್ರವೇಶಿಸಿದ್ದರು. ಮೂವರನ್ನು ನೇಪಾಳ ಪೊಲೀಸರು ತಡೆದಾಗ ವಾಗ್ವಾದ ನಡೆದು ಗೋವಿಂದ ಅವರ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.

- Advertisement -

 ʼಭಾರತದ ಮೂವರು ನೇಪಾಳ ಗಡಿ ಪ್ರವೇಶಿಸಿ ಅಲ್ಲಿನ ಪೊಲೀಸರೊಂದಿಗೆ ವಾಗ್ವಾದ ನಡೆಸಿರುವುದಾಗಿ ಮಾಹಿತಿ ಲಭಿಸಿದೆ. ಈ ವೇಳೆ ಗುಂಡಿನ ದಾಳಿ ನಡೆದು ಗಾಯಗೊಂಡಿದ್ದ ವ್ಯಕ್ತಿಯು ಆಸ್ಪತ್ರೆಗೆ ಸೇರಿಸುವ ವೇಳೆ ಮೃತಪಟ್ಟಿದ್ದಾನೆ. ಇನ್ನೊಬ್ಬ ಭಾರತದ ಗಡಿಯತ್ತ ಧಾವಿಸಿ ಜೀವ ಉಳಿಸಿಕೊಂಡಿದ್ದಾನೆ. ಆದರೆ, ಮತ್ತೊಬ್ಬ ವ್ಯಕ್ತಿ ನಾಪತ್ತೆಯಾಗಿದ್ದಾನೆʼ ಎಂದು ಪಿಲಿಭಿತ್‌ನ‌ ಪೊಲೀಸ್‌ ಸೂಪರಿಡೆಂಟ್‌ ಜೈ ಪ್ರಕಾಶ್‌ ತಿಳಿಸಿದ್ದಾರೆ.

ಘಟನೆ ಬಳಿಕ ಈ ಪ್ರದೇಶದಲ್ಲಿ ಪರಿಸ್ಥಿತಿ ಬಿಗಡಾಯಿಸಿದ್ದು, ಪೊಲೀಸರನ್ನು ನಿಯೋಜಿಸಲಾಗಿದೆ.

Join Whatsapp