ಪದ್ಮಶ್ರೀ ಪುರಸ್ಕ್ರತ ಕೇರಳದ ಕವಿ ನಂಬೂದಿರಿ ನಿಧನ

Prasthutha|

- Advertisement -

ಸಮಕಾಲೀನ ಮಲಯಾಳಂ ಸಾಹಿತ್ಯದ ವ್ಯಾಪಕ ಮೆಚ್ಚುಗೆ ಪಡೆದ ಕವಿಗಳಲ್ಲಿ ಒಬ್ಬರಾದ ಶ್ರೀ ವಿಷ್ಣು ನಾರಾಯಣನ್ ನಂಬೂದಿರಿ(81)ಅವರು ತನ್ನ ಸ್ವಗ್ರಹದಲ್ಲಿ ನಿಧನರಾದರು.

ಪತ್ತನಂತಿಟ್ಟ ಜಿಲ್ಲೆಯ ತಿರುವಲ್ಲಾದಲ್ಲಿ ಜನಿಸಿದ ನಂಬೂದಿರಿ 2014 ರಲ್ಲಿ ಪದ್ಮಶ್ರೀ ಪ್ರಶಸ್ತಿ ಪಡೆದಿದ್ದಾರೆ. ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವಾರು ಸಾಹಿತ್ಯ ಗೌರವಗಳಿಗೆ ಭಾಜನರಾಗಿದ್ದಾರೆ.

- Advertisement -

ನಂಬೂದಿರಿಯವರ ನಿಧನಕ್ಕೆ ಹಲವಾರು ಗಣ್ಯರು ಸಂತಾಪ ಪ್ರಕಟಿಸಿದ್ದು ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

Join Whatsapp