ಪ್ರಜ್ವಲ್ ಜಾಗದಲ್ಲಿ ಮುಸ್ಲಿಂ ವ್ಯಕ್ತಿ ಇದ್ದಿದ್ದರೆ ಹೋರಾಟ ಬೇರೆ ಸ್ವರೂಪ ಪಡೆದುಕೊಳ್ಳುತ್ತಿತ್ತು: ಸ್ವರಾ ಭಾಸ್ಕರ್

Prasthutha|

ನವದೆಹಲಿ: ಪ್ರಜ್ವಲ್ ಜಾಗದಲ್ಲಿ ಮುಸ್ಲಿಂ ವ್ಯಕ್ತಿ ಇದ್ದಿದ್ದರೆ ಹೋರಾಟ ಬೇರೆ ಸ್ವರೂಪವನ್ನೇ ಪಡೆದುಕೊಳ್ಳುತ್ತಿತ್ತು ಎಂದು ನಟಿ ಸ್ವರಾ ಭಾಸ್ಕರ್ ಹೇಳಿದ್ದಾರೆ.

- Advertisement -


ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಲೈಂಗಿಕ ದೌರ್ಜನ್ಯ ಅಪರಾಧಗಳ ಬಗ್ಗೆ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಮೌನದಿಂದ ನಾವು ಏಕೆ ಆಘಾತಕ್ಕೊಳಗಾಗಿದ್ದೇವೆ? ಮೋದಿಯವರು ತಿಳಿದಿದ್ದರೂ ಅವರ ಪರವಾಗಿ ಪ್ರಚಾರ ಮಾಡಿದ್ದಾರೆ ಎಂದು ನಮಗೆ ಏಕೆ ಆಘಾತವಾಗಿದೆ? ಕಥುವಾ, ಉನ್ನಾವೊ, ಹತ್ರಾಸ್, ಕುಲದೀಪ್ ಸೆಂಗಾರ್, ಬ್ರಿಜ್ಭೂಷಣ್ ಶರಣ್ ಮತ್ತು ಇತರರ ಉದಾಹರಣೆ ನಮ್ಮಲ್ಲಿದೆ! ಅಪರಾಧಿ ಮುಸ್ಲಿಂ ಅಥವಾ ಟಿಎಂಸಿ / ಕಾಂಗ್ರೆಸ್ ಆಗಿದ್ದರೆ ಮಾತ್ರ ಅವರು ಮಹಿಳೆಯರ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸುತ್ತಾರೆ ಎಂದು ಕಿಡಿಕಾರಿದ್ದಾರೆ.

Join Whatsapp