ಬಾಬ್ರಿ ಧ್ವಂಸ ತೀರ್ಪು ವಿರೋಧಿಸಿ ಪ್ರತಿಭಟನೆ: ಎಸ್.ಡಿ.ಪಿ.ಐ ಕಾರ್ಪೊರೇಟರ್ ಮುನೀಬ್ ಬೆಂಗ್ರೆ, ರಾಜ್ಯ ಕಾರ್ಯದರ್ಶಿ ಬಂಧನ

Prasthutha|

- Advertisement -

ಮಂಗಳೂರು: ಬಾಬ್ರಿ ಮಸ್ಜಿದ್ ಧ್ವಂಸ ಆರೋಪಿಗಳನ್ನು ದೋಷಮುಕ್ತಗೊಳಿಸಿ ವಿಶೇಷ ಸಿಬಿಐ ನ್ಯಾಯಾಲಯ ನೀಡಿದ ತೀರ್ಪನ್ನು ಖಂಡಿಸಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಇಂದು ಪ್ರತಿಭಟನೆ ನಡೆಸುತ್ತಿದ್ದ  ಎಸ್.ಡಿ.ಪಿ.ಐ ಕಾರ್ಪೊರೇಟರ್ ಮುನೀಬ್ ಬೆಂಗ್ರೆ, ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್  ಹಾಗೂ ಇತರ ನಾಯಕರನ್ನು ಬಂಧಿಸಿದ್ದಾರೆ.

ಮುನೀಬ್ ಬೆಂಗ್ರೆ ನೇತೃತ್ವದಲ್ಲಿ ನಡೆಯುತ್ತಿದ್ದ ಈ ಪ್ರತಿಭಟನೆಯಲ್ಲಿ ಜಿಲ್ಲಾ ಸಮಿತಿ ಸದಸ್ಯ ಆನಂದ ಮಿತ್ತಬೈಲು, ಎಸ್.ಡಿ.ಪಿ.ಐ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿ ಅಕ್ಬರ್ ಮತ್ತು ಮುಲ್ಕಿ-ಮೂಡಬಿದ್ರಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಆಸಿಫ್ ಕೋಟೆಬಾಗಿಲು ಪೊಲೀಸರಿಂದ ಬಂಧಿಸಲ್ಪಟ್ಟ ಇತರ ನಾಯಕರಾಗಿದ್ದಾರೆ.

- Advertisement -

ಪ್ರತಿಭಟನಾಕಾರರು ಸಿಬಿಐ ನ್ಯಾಯಾಲಯ ನೀಡಿದ ತೀರ್ಪಿನ್ನು ವಿರೋಧಿಸಿ ಘೋಷಣೆ ಕೂಗುತ್ತಿದ್ದರು. ತೀರ್ಪು ಧ್ವಂಸದ ಸಂಚುಕೋರರನ್ನು ಬಿಡುಗಡೆಗೊಳಿಸುತ್ತಿದ್ದು ನ್ಯಾಯದ ಅಣಕವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

Join Whatsapp