ಬಿಜೆಪಿಯವರು ಎಷ್ಟೇ ಮುಚ್ಚಿಟ್ಟರೂ ನಮಗೆ ಮಾಹಿತಿ ಸಿಗುತ್ತದೆ : ಡಿ.ಕೆ ಶಿವಕುಮಾರ್

Prasthutha|

ಬೆಂಗಳೂರು: ಬಿಜೆಪಿ ಸರ್ಕಾರ ಎಷ್ಟೇ ತಮ್ಮ ವೈಫಲ್ಯ ಮುಚ್ಚಿಡಲು ಎಷ್ಟೇ ಪ್ರಯತ್ನ ಮಾಡಿದರೂ ಎಲ್ಲೆಲ್ಲಿ, ಯಾವ ಆಸ್ಪತ್ರೆಯಲ್ಲಿ ಏನೆಲ್ಲಾ ಅನಾಹುತ ನಡೆಯುತ್ತಿದೆ ಎಂಬ ಮಾಹಿತಿ ನಮಗೆ ಸಿಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರು. ಇದು ಸಂವಿಧಾನ ಬದ್ಧವಾಗಿ ಬಂದಿರುವ ಹುದ್ದೆ, ಅಧಿಕಾರ. ಯಡಿಯೂರಪ್ಪನವರು ವಿರೋಧ ಪಕ್ಷದ ನಾಯಕರಾಗಿದ್ದಾಗ ಜಿಲ್ಲೆ ಪ್ರವಾಸ ಮಾಡಿ ಅಧಿಕಾರಿಗಳ ಜತೆ ಸಭೆ ಮಾಡಿಲ್ಲವೇ? ಈ ಸಂಕಷ್ಟದ ಸಮಯದಲ್ಲಿ ಜನರಿಗೆ ಯಾವ ರೀತಿ ನೆರವು ಮಾಡುತ್ತಿದ್ದಾರೆ ಎಂದು ಪರಿಶೀಲಿಸಲು ಅಡ್ಡಿ ಮಾಡುತ್ತಿರುವುದು, ಇವರು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೇಗೆ ನಾಶ ಮಾಡುತ್ತಿದ್ದಾರೆ ಎಂಬುದಕ್ಕೆ ಸಾಕ್ಷಿ ಎಂದು ಅವರು ಕಿಡಿಕಾರಿದ್ದಾರೆ.

ನಾವು ಬಳ್ಳಾರಿಗೆ ಪ್ರವಾಸ ಮಾಡಬೇಕಿತ್ತು, ಅನುಮತಿ ನೀಡದ ಹಿನ್ನೆಲೆಯಲ್ಲಿ ಅದನ್ನು ತಡೆ ಹಿಡಿಯಲಾಗಿದೆ. ಅವರು ಎಷ್ಟೇ ಮುಚ್ಚಿಟ್ಟರು, ಎಲ್ಲೆಲ್ಲಿ, ಯಾವ ಆಸ್ಪತ್ರೆಯಲ್ಲಿ ಏನೇನು ಹೆಚ್ಚುಕಮ್ಮಿ ಆಗುತ್ತಿದೆ ಎಂದು ನಮಗೆ ಮಾಹಿತಿ ಬರುತ್ತಿವೆ ಎಂದು ಅವರು ಹೇಳಿದ್ದಾರೆ.

Join Whatsapp