ಬಿಜೆಪಿಯೇತರ ಪಕ್ಷಗಳಿಗೆ ದೇಣಿಗೆ ನೀಡದಂತೆ ಕಾರ್ಪೊರೇಟ್ ಸಂಸ್ಥೆಗಳಿಗೆ ಬಿಜೆಪಿ ಬೆದರಿಕೆ ಒಡ್ಡುತ್ತಿದೆ – ಅಶೋಕ್ ಗೆಹ್ಲೋಟ್ ಗಂಭೀರ ಆರೋಪ

Prasthutha|

ಸೂರತ್: ಬಿಜೆಪಿಯೇತರ ಇತರ ಪಕ್ಷಗಳಿಗೆ ದೇಣಿಗೆ ನೀಡಲು ಬಯಸುವವರಿಗೆ, ಬಿಜೆಪಿಯು ನೀಡದಂತೆ ಬೆದರಿಕೆ ಒಡ್ಡುತ್ತಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಗಂಭೀರ ಆರೋಪ ಮಾಡಿದ್ದಾರೆ.

- Advertisement -

ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿಯಲ್ಲಿರುವ ಬಿಜೆಪಿಯು ಮಿತಿಮೀರಿದ ಸರ್ವಾಧಿಕಾರ ಮನೋಭಾವ ತೋರುತ್ತಿದ್ದು, ಬಿಜೆಪಿಯಲ್ಲದೆ ಇನ್ನಿತರ ರಾಜಕೀಯ ಪಕ್ಷಗಳಿಗೆ ದೇಣಿಗೆಯ ಕೊಡುಗೆಯನ್ನು ನೀಡಲು ಬಯಸುವ ಕಾರ್ಪೊರೇಟ್ ಸಂಸ್ಥೆಗಳಿಗೆ ಬಿಜೆಪಿಯು ತಡೆಯೊಡ್ಡುತ್ತಿದೆ ಎಂದು ಅವರು ಹೇಳಿದ್ದಾರೆ.

ಈ ಭೀತಿಯ ಕಾರಣದಿಂದ ಚುನಾವಣಾ ಬಾಂಡ್‌ಗಳ ಮೂಲಕ ಶೇ 95ರಷ್ಟು ದೇಣಿಗೆ ಬಿಜೆಪಿಗೇ ಹೋಗುತ್ತಿದೆ ಎಂದು ಭಾಸವಾಗುತ್ತಿದೆ ಎಂದೂ ಅವರು ಹೇಳಿದ್ದಾರೆ.

- Advertisement -

ಗುಜರಾತ್‌ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ಗೆಹ್ಲೋಟ್, ಸುದ್ದಿಗೋಷ್ಠಿಯಲ್ಲಿ ಈ ಬಗೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.

Join Whatsapp