ಬಿಜೆಪಿ ವಿಜಯೋತ್ಸವ| ಉಭಯ ಪಕ್ಷಗಳ ಕಾರ್ಯಕರ್ತರಿಂದ ಮಾರಾಮಾರಿ| ತಂದೆ-ಮಗ ಬಲಿ

Prasthutha|

ಜೈಪುರ: ಬಿಜೆಪಿ ವಿಜಯೋತ್ಸವದ ಸಂದರ್ಭ, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಕಾರ್ಯಕರ್ತರಿಂದ ನಡೆದ ಮಾರಾಮಾರಿಯಲ್ಲಿ ತಂದೆ-ಮಗ ಮೃತಪಟ್ಟಿರುವ ಘಟನೆ ರಾಜಸ್ಥಾನದ ಫತೇಪುರ ಪಟ್ಟಣದ ಬಲೋಡ್ ಬಡಿ ಗ್ರಾಮದಲ್ಲಿ ನಡೆದಿದೆ.

- Advertisement -

ಪಂಚಾಯತ್ ಸಮಿತಿ ಫತೇಪುರ ವಾರ್ಡ್ ನಂ.19ರಲ್ಲಿ ಬಿಜೆಪಿ ಅಭ್ಯರ್ಥಿ ರುಬಿನಾ ಖಾನ್ ಭರ್ಜರಿ ಗೆಲುವು ಸಾಧಿಸಿದ್ದ ಹಿನ್ನೆಲೆಯಲ್ಲಿ ಮೆರವಣಿಗೆ ನಡೆಯುತ್ತಿತ್ತು. ಈ ಸಂದರ್ಭ ಮೆರವಣಿಗೆಯಲ್ಲಿದ್ದ ಯುವಕನನ್ನು ಯಾರೋ ಥಳಿಸಿದ್ದರು. ಇದರಿಂದಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಘರ್ಷಣೆ ನಡೆಸಿದರು. ಅಷ್ಟರಲ್ಲಿ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದರು.

ಮಾರಾಮಾರಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕನ್ಹಯ್ಯಾಲಾಲ್(35) ಹಾಗೂ ತಂದೆ ಪ್ಯಾರೆಲಾಲ್(57) ರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ ಮಗ ನಡುದಾರಿಯಲ್ಲೇ ಮೃತಪಟ್ಟರೆ, ತಂದೆ ಚಿಕಿತ್ಸೆ ಫಲಾಕಾರಿಯಾಗದೆ ಮೃತಪಟ್ಟರು.

- Advertisement -

ಗಲಾಟೆಯಲ್ಲಿ ಕನಿಷ್ಟ ಹತ್ತು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  

Join Whatsapp