ಭಾರತದ ರಾಜಕೀಯ ಲಾಭಕ್ಕಾಗಿ ಭಾಷಣಗಳಲ್ಲಿ ಪಾಕಿಸ್ತಾನವನ್ನು ಎಳೆಯಬೇಡಿ: ಮುಮ್ತಾಝ್ ಝಹ್ರಾ

Prasthutha|

ಇಸ್ಲಾಮಾಬಾದ್: ಭಾರತದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಅನಗತ್ಯವಾಗಿ ಪಾಕಿಸ್ತಾನವನ್ನು ಪ್ರಸ್ತಾಪಿಸುವುದಕ್ಕೆ ಆ ದೇಶ ಅಸಮಾಧಾನ ಹೊರ ಹಾಕಿದೆ. ಭಾರತದ ರಾಜಕೀಯ ನಾಯಕರು ತಮ್ಮ ಚುನಾವಣಾ ಭಾಷಣದಲ್ಲಿ ಅನಾವಶ್ಯಕವಾಗಿ ಪಾಕಿಸ್ತಾನವನ್ನು ಎಳೆದು ತರುತ್ತಿದ್ದಾರೆ ಎಂದು ಅಸಹನೆ ವ್ಯಕ್ತಪಡಿಸಿದೆ. ಭಾರತದ ರಾಜಕೀಯ ಲಾಭಕ್ಕಾಗಿ ತಮ್ಮ ಭಾಷಣಗಳಲ್ಲಿ ದೇಶವನ್ನು ಎಳೆಯುವುದನ್ನು ನಿಲ್ಲಿಸಬೇಕೆಂದು ಪಾಕಿಸ್ತಾನ ಭಾರತೀಯ ರಾಜಕೀಯ ನಾಯಕರನ್ನು ಒತ್ತಾಯಿಸಿದೆ.

- Advertisement -

ಇಸ್ಲಾಮಾಬಾದ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಾಕಿಸ್ತಾನದ ವಿದೇಶಾಂಗ ಕಚೇರಿ ವಕ್ತಾರೆ ಮುಮ್ತಾಝ್ ಝಹ್ರಾ ಬಲೋಚ್, ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಭಾರತೀಯ ನಾಯಕರು ಮಾಡುವ ಎಲ್ಲಾ ಹಕ್ಕುಗಳನ್ನು ಇಸ್ಲಾಮಾಬಾದ್ ತಿರಸ್ಕರಿಸುತ್ತದೆ. ಭಾರತದ ರಾಜಕಾರಣಿಗಳು ಚುನಾವಣಾ ಉದ್ದೇಶಗಳಿಗಾಗಿ ಪಾಕಿಸ್ತಾನವನ್ನು ತಮ್ಮ ಸಾರ್ವಜನಿಕ ಭಾಷಣದಲ್ಲಿ ಎಳೆದು ತರುವ ಅಜಾಗರೂಕ ಅಭ್ಯಾಸವನ್ನು ಕೂಡಲೇ ನಿಲ್ಲಿಸಬೇಕು” ಎಂದು ಅವರು ಕಿಡಿಗಾರಿದ್ದಾರೆ.

ಕಾಶ್ಮೀರದ ಬಗ್ಗೆಯೂ ಪ್ರಸ್ತಾಪಿಸಿದ ಅವರು,ಜಮ್ಮು ಮತ್ತು ಕಾಶ್ಮೀರದ ಮೇಲೆ ಅನಗತ್ಯವಾದ ಹಕ್ಕುಗಳನ್ನು ಪ್ರತಿಪಾದಿಸುವ ಭಾರತೀಯ ನಾಯಕರಿಂದ ಪ್ರಚೋದನಕಾರಿ ಹೇಳಿಕೆಗಳು ಆತಂಕಕಾರಿ. ಪಾಕಿಸ್ತಾನವು ಈ ಹಕ್ಕುಗಳನ್ನು ತಿರಸ್ಕರಿಸುತ್ತದೆ. ಅತಿ-ರಾಷ್ಟ್ರೀಯತೆಯಿಂದ ಉತ್ತೇಜಿತವಾಗಿರುವ ಈ ಪ್ರಚೋದನಕಾರಿ ಮಾತುಗಳು ಪ್ರಾದೇಶಿಕ ಶಾಂತಿ ಮತ್ತು ಸಂವೇದನಾಶೀಲತೆಗೆ ಗಂಭೀರ ಬೆದರಿಕೆಯನ್ನುಂಟುಮಾಡುತ್ತದೆ ಎಂದಿದ್ದಾರೆ.

- Advertisement -

Join Whatsapp