ಮಂಗಳೂರು: ದ್ವೇಷ ಭಾಷಣದ ವಿರುದ್ಧ ಸುರತ್ಕಲ್ ಠಾಣೆ ಯಲ್ಲಿ ಜಾಮೀನು ರಹಿತ FIR ದಾಖಲು

Prasthutha|

ಮಂಗಳೂರು: ನಗರದ ಹೊರವಲಯದ ಸುರತ್ಕಲ್ ನಲ್ಲಿ ನಡೆದ ಜನಜಾಗೃತಿ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಚೈತ್ರಾ ಕುಂದಾಪುರ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಆರೋಪಿತೆ ಚೈತ್ರಾ ಕುಂದಾಪುರ ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರದವರಾಗಿದ್ದು, ಅಕ್ಟೋಬರ್ 4 ರಂದು ಸುರತ್ಕಲ್ ನಗರದಲ್ಲಿ ಬಜರಂಗದಳ ಹಾಗೂ ದುರ್ಗಾ ವಾಹಿನಿ ವತಿಯಿಂದ ನಡೆದಿದ್ದ ಜನಜಾಗೃತಿ ಸಭೆಯಲ್ಲಿ ಬ್ಯಾರಿ ಜನಾಂಗ ಹಾಗೂ ಮುಸ್ಲಿಂ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಭಾಷಣ ಮಾಡಿದ್ದರು. ಈಕೆಯ ದ್ವೇಷಪೂರಿತ ಭಾಷಣದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಘಟನೆ ಸಂಬಂಧ ಇಂದು ಇಡ್ಯಾ ನಿವಾಸಿ, ಪಿಎಫ್ಐ ಸಂಘಟನೆಯ ಕಾರ್ಯಕರ್ತ ಅಬ್ದುಲ್ ಖಾದರ್ ಎಂಬವರು ಸುರತ್ಕಲ್ ಠಾಣೆಗೆ ನೀಡಿದ ದೂರಿನಡಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.
ಎರಡು ಸಮಯದಾಯಗಳ ನಡುವೆ ದ್ವೇಷ ಬಿತ್ತುವ ಹಾಗೂ ಪ್ರಚೋದನೆ ನೀಡಿದ ಆರೋಪದಡಿ ಐಪಿಸಿ ಸೆಕ್ಷನ್ 153(A), 505(2) ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Join Whatsapp