ಮಂಗಳೂರು : ಮತ್ತೊಮ್ಮೆ ವಲಸೆ ಕಾರ್ಮಿಕರ ಗುಳೇ ಪ್ರಾರಂಭ ! KSRTC ಬಸ್ ನಿಲ್ದಾಣದಲ್ಲಿ ಜನಜಂಗುಳಿ !

Prasthutha|

ಮಂಗಳೂರು : ರಾಜ್ಯ ಸರಕಾರ ನಾಳೆ ರಾತ್ರಿಯಿಂದ 14 ದಿನಗಳ ಕಾಲ ಕೋವಿಡ್​ ಕರ್ಫ್ಯೂ ಜಾರಿಗೊಳಿಸಿದೆ. ಹೀಗಾಗಿ ಮಂಗಳೂರು ನಗರದಿಂದ ವಲಸೆ ಕಾರ್ಮಿಕರು ತಮ್ಮ ತಮ್ಮ ಊರಿಗೆ ಪ್ರಯಾಣ ಬೆಳೆಸಲು ಆರಂಭಿಸಿದ್ದಾರೆ‌.

- Advertisement -

ಹೀಗಾಗಿ ಬಿಜೈ ಕೆಎಸ್ಆರ್​ಟಿಸಿ ಬಸ್ ನಿಲ್ದಾಣ ಪೂರ್ತಿ‌ ಜನ ಜಂಗುಳಿಯಿಂದ ತುಂಬಿದೆ.ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ವಲಸೆ ಕಾರ್ಮಿಕರು ಮಂಗಳೂರು ನಗರದಲ್ಲಿ ಬದುಕು ಕಟ್ಟಿಕೊಂಡಿದ್ದರು‌. ಆದರೆ, ಇದೀಗ ರಾಜ್ಯ ಸರ್ಕಾರ 14 ದಿನಗಳ ಲಾಕ್​ಡೌನ್ ಘೋಷಣೆ ಮಾಡಿದ್ದು, ಎಲ್ಲರೂ ಸಾಮಾನು ಸರಂಜಾಮುಗಳೊಂದಿಗೆ ತಮ್ಮ ಊರುಗಳಿಗೆ ಪ್ರಯಾಣ ಬೆಳೆಸಿದ್ದಾರೆ. ಕರ್ಫ್ಯೂ ಹಿನ್ನೆಲೆ ಕೆಲಸಗಳಿಲ್ಲದಿರುವುದರಿಂದ ಎಲ್ಲರೂ ತಮ್ಮ ಊರುಗಳಿಗೆ ಪ್ರಯಾಣ ಬೆಳೆಸಿದ್ದಾರೆ. ರಾಯಚೂರು, ಕುಷ್ಟಗಿ, ಗದಗ, ಬಾದಾಮಿ, ಬಿಜಾಪುರ ಮುಂತಾದ ಕಡೆಗಳಿಗೆ ಹೊರಟಿರುವ ವಲಸಿಗ ಕಾರ್ಮಿಕರು ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ಜಮಾಯಿಸಿದ್ದಾರೆ.

Join Whatsapp