ಮಂಗಳೂರು | ಮದುವೆ ಹೆಸರಲ್ಲಿ ಮೋಸ ಮಾಡಿ, ಉದ್ಯೋಗ ಕೊಡಿಸುವುದಾಗಿ ನಂಬಿಸುತ್ತಿದ್ದ ವಂಚಕನ ಬಂಧನ

Prasthutha|

ಪೇಸ್ ಬುಕ್ ನಲ್ಲಿ ನಕಲಿ ಖಾತೆ ಸೃಷ್ಟಿಸಿ ಮದುವೆ ಹೆಸರಲ್ಲಿ ಮೋಸ ಮಾಡಿ, ಉದ್ಯೋಗ ಕೊಡಿಸುವುದಾಗಿ ನಂಬಿಸಿ 20 ಲಕ್ಷಕ್ಕೂ ಅಧಿಕ ಹಣವನ್ನು ವಂಚಿಸುತ್ತಿದ್ದ ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಕುರುಬನಹಳ್ಳಿ ನಿವಾಸಿ ಪರಮೇಶ್ವರಪ್ಪ ರಂಗಪ್ಪ(23) ನನ್ನು ನಗರ ಪೊಲೀಸರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

ಮಂಗಳೂರು ವಿಭಾಗದ ಅಂಚೆ ಇಲಾಖೆಯ ಹಿರಿಯ ಅಧಿಕಾರಿ ಎಂದು ನಂಬಿಸುತ್ತಿದ್ದ ರಂಗಪ್ಪ, ಗೋವಾದ ನಿವಾಸಿ ಹನುಮಪ್ಪ ಬಿಸಳ್ಳಿ ಎಂಬವರ ಪುತ್ರಿಗೆ ವಾಟ್ಸಾಪ್ ಮುಖಾಂತರ ತನಗೆ ರಾಜ್ಯೋತ್ಸವ ಮತ್ತು ಮೇಘದೂತ ಪ್ರಶಸ್ತಿ ದೊರಕಿರುವ ಬಗ್ಗೆ ಮಾಹಿತಿ ನೀಡಿದ್ದ. ತನ್ನ ಪುತ್ರಿಗೆ ನೆಂಟಸ್ತಿಕೆ ಬಂದ ಹಿನ್ನೆಯಲ್ಲಿ, ಮಂಗಳೂರಿನ ಅಂಚೆ ಇಲಾಖೆಯಲ್ಲಿ ವಿಚಾರಿಸಿದಾಗ ಸತ್ಯಾಂಶ ಬೆಳಕಿಗೆ ಬಂದಿದೆ.

ಈ ಕುರಿತು ಅಂಚೆ ಇಲಾಖೆಯ ಹಿರಿಯ ಅಧಿಕಾರಿ ಡಿ.2 ರಂದು ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದು, ಆರೋಪಿ ಈವರೆಗೆ 13 ಮಂದಿಗೆ 15-20 ಲಕ್ಷ ರೂ. ವಂಚಿಸಿದ್ದಾನೆ.

- Advertisement -

ಆರೋಪಿಯು ಫೇಸ್ ಬುಕ್ ನಲ್ಲಿ ಬೇರೆ ಬೇರೆ ಹೆಸರಿನಿಂದ ಖಾತೆ ತೆರೆದಿದ್ದು, ಹಲವು ಸರಿಕಾರಿ ಇಲಾಖೆಗಳ ಉತ್ತಮ ದರ್ಜೆಯ ಅಧಿಕಾರಿಗಳೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಸ್ನೇಹ ಸಂಬಂಧ ಬೆಳೆಸಿದ್ದ. ಅಧಿಕಾರಿಗಳ ಜತೆಗಿನ ಫೇಸ್ ಬುಕ್ ಸ್ನೇಹವನ್ನು ಆತ ದುರುಪಯೋಗ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿದ್ದಾರೆ.

ಆರೋಪಿಯಿಂದ ಲ್ಯಾಪ್ ಟಾಪ್, ಅಂಚೆ ಇಲಾಖೆಯ ನಕಲಿ ಗುರುತು ಚೀಟಿ, ಐಸಿಐಸಿ ಬಾಂಕ್ ಡೆಬಿಟ್ ಕಾರ್ಡ್ ಹಾಗೂ 5 ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿಯನ್ನು ನಗರದ 2ನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

 ಸುಮಾರು 20 ನಕಲಿ ಖಾತೆಗಳನ್ನು ಸೃಷ್ಟಿಸಿದ್ದಾನೆ. ಬೇರೆ ಬೇರೆ ಹೆಸರಿನಿಂದ ಖಾತೆ ತೆರೆದಿದ್ದು, ಅಂಚೆ, ಪೊಲೀಸ್, ಅರಣ್ಯ, ಕೆಪಿಟಿಸಿಎಲ್, ಶಿಕ್ಷಣ ಇಲಾಖೆ ಸಹಿತ ಇತರ ಸರಕಾರಿ ಇಲಾಖೆಗಳ ಉತ್ತಮ ದರ್ಜೆಯ ಅಧಿಕಾರಿಗಳೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಸ್ನೇಹ ಬೆಳೆಸಿದ್ದ. ಅಧಿಕಾರಿಗಳ ಜತೆಗಿನ ‘ಫೇಸ್ಬುಕ್ ಸ್ನೇಹ’ವನ್ನು ಪ್ರಭಾವದಂತೆ ದುರ್ಬಳಕೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯು ಡಿ.20 ರಂದು ಮಂಗಳೂರು ನಗರದ ಸಶಸ್ತ್ರ ಮೀಸಲು ಪಡೆಯ ಇಬ್ಬರು ಪೊಲೀಸರಿಗೂ ಮಹಿಳೆಯ ಹೆಸರಲ್ಲಿ ನಕಲಿ ಖಾತೆಯ ಮೂಲಕ ಅಂಚೆ ಇಲಾಖೆಯಲ್ಲಿನ ಗ್ರೇಡ್-1, ಗ್ರೇಡ್-2 ಹುದ್ದೆ ಖಾಲಿ ಇರುವುದಾಗಿ ತಿಳಿಸಿದ್ದ. ಬಳಿಕ ಇಬ್ಬರಿಂದಲೂ 6 ಲಕ್ಷ ರೂ. ವಂಚಿಸಿದ್ದ. ಈ ಬಗ್ಗೆ ತನಿಖೆ ನಡೆಸಿದ ಸೈಬರ್ ಕ್ರೈಂ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Join Whatsapp