ಮಂಗಳೂರು ಸೆಂಟ್ರಲ್ ಮಾರುಕಟ್ಟೆ ಬಂದ್ ಗೆ ಜಿಲ್ಲಾಡಳಿತ ಆದೇಶ

Prasthutha|

ಮಂಗಳೂರು : ಕೊರೋನ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಪಾದಿಕೊಳ್ಳುವ ಸಲುವಾಗಿ ಮಂಗಳೂರಿನ ಸೆಂಟ್ರಲ್ ಮಾರುಕಟ್ಟೆ ಬಂದ್ ಮಾಡಲು ಜಿಲ್ಲಾಡಳಿತ ಆದೇಶಿಸಿದೆ. ಈ ಕುರಿತು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶ ಹೊರಡಿಸಿದ್ದಾರೆ. ಮಾರುಕಟ್ಟೆಯಲ್ಲಿನ ವ್ಯಾಪಾರಿಗಳು ಬೈಕಂಪಾಡಿ ಎಪಿಎಂಸಿಯಲ್ಲಿ ವ್ಯಾಪಾರ ನಿರ್ವಹಿಸುವಂತೆ ಸೂಚಿಸಲಾಗಿದೆ.

- Advertisement -

ಜಿಲ್ಲಾಡಳಿತದ ಕ್ರಮ ಪಾಲಿಸದ ವ್ಯಾಪಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಆದೇಶ ಪಾಲನೆಯಾಗುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.

ಮಂಗಳೂರು ಮಹಾನಗರ ಪಾಲಿಕೆ ನ್ಯಾಯಾಲಯದಲ್ಲಿ ಸೆಂಟ್ರಲ್ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಬಂದ್ ಮಾಡುವ ಕುರಿತು ದಾಖಲಿಸಿದ್ದ ದೂರನ್ನು ಹಿಂಪಡೆದಿತ್ತು. ಹೀಗಾಗಿ ಆ.13ರಂದು ವ್ಯಾಪಾರಿಗಳು ಮಾರುಕಟ್ಟೆಯಲ್ಲಿ ವ್ಯಾಪಾರ ಆರಂಭಿಸಿದ್ದರು.

Join Whatsapp