ಮಣಿಪುರ | ಮತಗಟ್ಟೆ ಬಳಿ ಗುಂಡಿನ ದಾಳಿ: ಮೂವರ ಬಂಧನ

Prasthutha|

ಇಂಫಾಲ(ಮಣಿಪುರ): ಇಂಫಾಲ್ ಪೂರ್ವ ಜಿಲ್ಲೆಯ ಮತಗಟ್ಟೆಯ ಬಳಿ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದ ಮೂವರು ದುಷ್ಕರ್ಮಿಗಳನ್ನು ಮಣಿಪುರ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

- Advertisement -

ಶುಕ್ರವಾರ ಮೊಯಿರಂಗ್ಯಾಂಪು ಸಾಜೆಬ್ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಬಂಧಿತ ವ್ಯಕ್ತಿಗಳು ಭಾಗಿಯಾಗಿದ್ದು, ಘಟನೆಯಲ್ಲಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಬಂಧಿತರಿಂದ 22 ಪಿಸ್ತೂಲ್ಗಳು ಮತ್ತು ₹15 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ.

Join Whatsapp