ಮತ್ತೆ ಖಾತೆ ಬದಲಾವಣೆ; ಮಾಧುಸ್ವಾಮಿಗೆ ಸಣ್ಣ ನೀರಾವರಿ, ಆನಂದ್ ಸಿಂಗ್ ಗೆ ಹಜ್, ವಕ್ಫ್ ಖಾತೆ

Prasthutha|

ಸಚಿವರಿಗೆ ಹಂಚಿಕೆ ಮಾಡಿರುವ ಖಾತೆಗಳ ಬದಲಾವಣೆ ಮಾಡುವ ಪ್ರಕ್ರಿಯೆ ಮತ್ತೆ ಮುಂದುವರಿದಿದೆ. ವೈದ್ಯಕೀಯ ಶಿಕ್ಷಣ ಖಾತೆ ನೀಡಿದ್ದರಿಂದ ಅಸಮಾಧಾನಗೊಂಡು ಕ್ಯಾಬಿನೆಟ್ ಸಭೆ ಸೇರಿದಂತೆ ಇತರ ಕೆಲವು ಸಭೆಗಳಿಂದ ದೂರ ಉಳಿದಿದ್ದ ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೆ ಹಜ್ ಮತ್ತು ವಕ್ಫ್ ಖಾತೆ ನೀಡಿ ಸಮಾಧಾನ ಪಡಿಸಲು ಮುಖ್ಯಮಂತ್ರಿ ಪ್ರಯತ್ನಿಸಿದ್ದರು. ಬಳಿಕ ಪ್ರವಾಸೋದ್ಯಮ, ಪರಿಸರ ವಿಜ್ಞಾನ ಖಾತೆ ನೀಡಲಾಗಿತ್ತು. ಆದರೆ ಸಣ್ಣ ನೀರಾವರಿ ಇಲಾಖೆಯೇ ಬೇಕು ಎಂದು ಪಟ್ಟು ಹಿಡಿದಿದ್ದ ಜೆ.ಸಿ.ಮಾಧುಸ್ವಾಮಿ ಅವರಿಗೆ ಇಂದು ಸಿ.ಪಿ.ಯೋಗೇಶ್ವರ್ ಅವರ ಬಳಿ ಇದ್ದ ಸಣ್ಣ ನೀರಾವರಿ ಖಾತೆಯನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಲಾಗಿದೆ.
ಸಿ.ಪಿ.ಯೋಗೇಶ್ವರ್ ಅವರಿಗೆ ಪ್ರವಾಸೋದ್ಯಮ, ಪರಿಸರ ವಿಜ್ಞಾನ ಖಾತೆಯನ್ನು ಹಂಚಿಕೆ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ. ಆನಂದ್ ಸಿಂಗ್ ಅವರಿಗೆ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಜೊತೆಗೆ ಹಜ್ ಮತ್ತು ವಕ್ಫ್ ಖಾತೆ ನೀಡಲಾಗಿದೆ. ಡಾ.ಕೆ.ಸುಧಾಖರ್ ಗೆ ಆರೋಗ್ಯ ಇಲಾಖೆಯ ಜೊತೆಗೆ ವೈದ್ಯಕೀಯ ಶಿಕ್ಷಣ ಖಾತೆಯನ್ನು ಹಂಚಿಕೆ ಮಾಡಲಾಗಿದೆ.

Join Whatsapp