ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮೊಮ್ಮಗಳ ಆತ್ಮಹತ್ಯೆ

Prasthutha|

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಸೌಂದರ್ಯ (30) ಎಂದು ಗುರುತಿಸಲಾಗಿದೆ. ಬಿಎಸ್ವೈ ಅವರ ಎರಡನೇ ಪುತ್ರಿ ಪದ್ಮಾವತಿ ಅವರ ಪುತ್ರಿಯಾಗಿದ್ದಾರೆ ಸೌಂದರ್ಯ. ಸದ್ಯಕ್ಕೆ ಮೃತದೇಹವನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಸಾಗಿಸಲಾಗಿದೆ  ಎಂದು ತಿಳಿದು ಬಂದಿದೆ.

- Advertisement -

ಸೌಂದರ್ಯ ಅವರು ಬೆಂಗಳೂರಿನ ಖ್ಯಾತ ಎಂ. ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದರು ಎನ್ನಲಾಗಿದೆ. ಅವರಿಗೆ ಒಂದು ಮಗು ಇದೆ ಎಂದು ವರದಿಯಾಗಿದೆ. ಸೌಂದರ್ಯ ಅವರು ಡಾ. ನೀರಜ್ ಅವರನ್ನು ಮದುವೆಯಾಗಿದ್ದರು. 2018ರಲ್ಲಿ ಇವರಿಗೆ ಮದುವೆಯಾಗಿತ್ತು

ಬೆಂಗಳೂರಿನಲ್ಲಿರುವ ವಸಂತ ನಗರದ ಮನೆಯಲ್ಲಿ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.  ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

- Advertisement -

ಸೌಂದರ್ಯ ಅವರು ಎಂಎಸ್ ರಾಮಯ್ಯ ಕಾಲೇಜಿನಲ್ಲಿ ಸರ್ಜರಿಯಲ್ಲಿ ಸ್ನಾತಕೋತ್ತರ ಪದವಿ (ಎಂಎಸ್) ಪಡೆದಿದ್ದರು. ಅವರು ಎಂಎಸ್ ರಾಮಯ್ಯ ಕಾಲೇಜಿನ ರೇಡಿಯಾಲಜಿಸ್ಟ್ ಡಾ ನೀರಜ್ ಅವರನ್ನು ವಿವಾಹವಾಗಿದ್ದರು.  ಕಳೆದ ವರ್ಷ ದಂಪತಿಗೆ ಮಗುವಾಗಿತ್ತು.

ಮುಖ್ಯಮಂತ್ರಿ ಬೊಮ್ಮಾಯಿ ಸೇರಿದಂತೆ ಹಿರಿಯ ಗಣ್ಯರು ಯಡಿಯೂರಪ್ಪ ಮನೆಗೆ ಭೇಟಿ ನೀಡಿದ್ದಾರೆ.

Join Whatsapp