ರಾಜಸ್ಥಾನ ಕಾಂಗ್ರೆಸ್’ನಲ್ಲಿ ಬಂಡಾಯ: ಅಧ್ಯಕ್ಷ ಚುನಾವಣಾ ಕಣದಿಂದ ಅಶೋಕ್ ಗೆಹ್ಲೋಟ್ ಹೊರಕ್ಕೆ

Prasthutha|

ನವದೆಹಲಿ: ರಾಜಸ್ಥಾನ ಕಾಂಗ್ರೆಸ್’ನಲ್ಲಿ 90ಕ್ಕೂ ಅಧಿಕ ಶಾಸಕರು ಬಂಡಾಯವೆದ್ದಿರುವ ಬೆನ್ನಲ್ಲೇ ಹಿರಿಯ ಮುಖಂಡ ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷಗಿರಿಗೆ ನಡೆಯುವ ಚುನಾವಣಾ ಕಣದಿಂದ ಹೊರಗುಳಿದಿದ್ದಾರೆ.

- Advertisement -

ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯ ವೇಳೆ ಬಂಡಾಯಕ್ಕೆ ಸಂಚು ರೂಪಿಸುವ ಮೂಲಕ ಪಕ್ಷವನ್ನು ಮುಜುಗರಕ್ಕೀಡುಮಾಡಿದ ಹಿನ್ನೆಲೆಯಲ್ಲಿ ಗಾಂಧಿ ಪರಿವಾರ ಅಶೋಕ್ ವಿರುದ್ಧ ಅಸಮಾಧಾನ ಹೊಂದಿದೆ.

ಅಲ್ಲದೆ ರಾಜಸ್ಥಾನ ಮುಖ್ಯಮಂತ್ರಿ ಹುದ್ದೆಯನ್ನು ಬಿಟ್ಟುಕೊಡಲು ಗೆಹ್ಲೋಟ್ ಅವರು ನಿರಾಕರಿಸಿರುವುದು ಕಾಂಗ್ರೆಸ್ ಹೈಕಮಾಂಡ್ ಅನ್ನು ನಿರಾಸೆಗೊಳಿಸಿದೆ.

- Advertisement -

ಈ ಹಿಂದೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಷ್ಟ್ರೀಯ ರಾಜಕಾರಣಕ್ಕೆ ಹೋಗಲು ಒಪ್ಪಿಕೊಂಡಿದ್ದ ಆಶೋಕ್, ಭಾನುವಾರ ನಡೆದ ಮಹತ್ವದ ಶಾಸಕರ ಸಭೆಯ ಬಳಿಕ ಸಚಿನ್ ಪೈಲಟ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರೆ ರಾಜೀನಾಮೆ ನೀಡುವ ಬೆದರಿಕೆಯನ್ನು ಹಾಕಿದ್ದಾರೆ.

Join Whatsapp