ಕೊಣಾಜೆ | ರಾಜ್ಯ ಹಜ್ ಕಮಿಟಿ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ

Prasthutha|

ಕೊಣಾಜೆ: ಬಿಜೆಪಿ ಬೆಂಬಲಿಗ ಹಾಗೂ ರಾಜ್ಯ ಹಜ್ ಕಮಿಟಿ ಸದಸ್ಯ ಮೌಲ್ವಿ ಹನೀಫ್ ನಿಜಾಮಿ ಅವರ ಮೇಲೆ ವ್ಯಕ್ತಿಯೋರ್ವ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮಂಜನಾಡಿಯ ಅಸೈಗೋಳಿಯಲ್ಲಿ ನಡೆದಿದೆ.  

- Advertisement -

ಮಂಜನಾಡಿ ಗ್ರಾಮ ಪಂಚಾಯತ್ನ ಒಂದನೇ ವಾರ್ಡ್ ನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ನಿಂತಿದ್ದ ಹನೀಫ್ ಅವರ ತಲೆಗೆ ಸುತ್ತಿಗೆಯಿಂದ ಬಡಿಯಲಾಗಿದ್ದು, ಪರಿಣಾಮ ಗಂಭೀರ ಗಾಯಗೊಂಡಿದ್ದ ಅವರನ್ನು ದೇರಳಕಟ್ಟೆಯ ಕಣಚೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಕಾಂಗ್ರೆಸ್ ಕಾರ್ಯಕರ್ತ ಅಸೈಗೋಳಿ ನಿವಾಸಿ ಕರೀಂ ಈ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

Join Whatsapp