ರಾಮಮಂದಿರ ಜಮೀನು ಖರೀದಿಯಲ್ಲಿ ಭಾರೀ ಭ್ರಷ್ಟಾಚಾರ: ಎಸ್ ಪಿ, ಎಎಪಿ ಆರೋಪ

Prasthutha|

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಜಮೀನು ಖರೀದಿಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಎಎಪಿಯ ರಾಜ್ಯ ಸಭಾ ಸದಸ್ಯ ಸಂಜಯ್ ಸಿಂಗ್ ಮತ್ತು ಸಮಾಜವಾದಿ ಪಕ್ಷದ ಮುಖಂಡ ಪವನ್ ಪಾಂಡೆ ಆರೋಪಿಸಿದ್ದಾರೆ.
2 ಕೋಟಿ ರೂ. ಬೆಲೆ ಬಾಳುವ ಜಮೀನನ್ನು 18.5 ಕೋಟಿಗೆ ಖರೀದಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

- Advertisement -


ಇಬ್ಬರು ರಿಯಲ್ ಎಸ್ಟೇಟ್ ಡೀಲರ್‌ಗಳು ವ್ಯಕ್ತಿಯೊಬ್ಬರಿಂದ 2 ಕೋಟಿ ರೂಪಾಯಿಗೆ ಆಸ್ತಿಯೊಂದನ್ನು ಖರೀದಿಸಿ, ಕೆಲವೇ ನಿಮಿಷಗಳಲ್ಲಿ ಅದನ್ನು ಟ್ರಸ್ಟ್‌ಗೆ 18.5 ಕೋಟಿ ರೂಪಾಯಿಗೆ ಮಾರಾಟ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಸ್ಥಳೀಯ ಬಿಜೆಪಿ ನಾಯಕರು ಮತ್ತು ಟ್ರಸ್ಟಿನ ಕೆಲವು ಸದಸ್ಯರ ಸಮ್ಮತಿಯೊಂದಿಗೆ ಈ ಅಕ್ರಮ ಭೂ ಒಪ್ಪಂದ ನಡೆದಿದೆ ಎಂದು ಅಯೋಧ್ಯಾದಲ್ಲಿ ಸಮಾಜವಾದಿ ಪಕ್ಷದ ಮಾಜಿ ಶಾಸಕ ಪವನ್ ಪಾಂಡೆ ಭಾನುವಾರ ಆರೋಪಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಕೆಲವು ದಾಖಲೆಗಳನ್ನು ಅವರು ಬಿಡುಗಡೆ ಮಾಡಿದ್ದಾರೆ. ಈ ವ್ಯವಹಾರಕ್ಕೆ ಅಯೋಧ್ಯಾದ ಮೇಯರ್ ಹಾಗೂ ಟ್ರಸ್ಟ್‌ನ ಸ್ಥಳೀಯ ಸದಸ್ಯರೊಬ್ಬರು ಸಾಕ್ಷಿಗಳಾಗಿ ಸಹಿ ಹಾಕಿದ್ದರು ಎಂದು ತಿಳಿಸಿದ್ದಾರೆ.
ಮತ್ತೊಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಎಪಿ ಮುಖಂಡ ಮತ್ತು ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್, ‘ಶ್ರೀರಾಮನ ಹೆಸರಿನಲ್ಲಿ ಭ್ರಷ್ಟಾಚಾರ ನಡೆಯಲಿದೆ ಎಂಬುದನ್ನು ಯಾರೂ ಊಹಿಸಿರಲಿಲ್ಲ. ಆದರೆ ಕೋಟ್ಯಂತರ ರೂಪಾಯಿ ವಂಚನೆ ನಡೆದಿದೆ ಎಂಬುದನ್ನು ಈ ದಾಖಲೆಗಳು ತೋರಿಸುತ್ತವೆ ಎಂದು ಆರೋಪಿಸಿದ್ದಾರೆ.

Join Whatsapp