ರಾಯಚೂರು: ಬಿಸಿಲ ಝಳಕ್ಕೆ ಒಂದೇ ದಿನದಲ್ಲಿ ಐವರು ಮೃತ್ಯು

Prasthutha|

ರಾಯಚೂರು: ಜಿಲ್ಲೆಯಲ್ಲಿ ಭಾರಿ ಬಿಸಿಲು ಆವರಿಸಿಕೊಂಡಿದ್ದು, ಬಿಸಿಲಿನ ಝಳಕ್ಕೆ ಕಳೆದ 24 ಗಂಟೆಗಳ ಅವಧಿಯಲ್ಲಿ ಐವರು ಮೃತಪಟ್ಟಿದ್ದಾರೆ.

- Advertisement -


ವೀರೇಶ ಹನುಮಂತಪ್ಪ ಮಡಿವಾಳ(50) ಹಳ್ಳಕ್ಕೆ ಬಟ್ಟೆ ತೊಳೆಯಲು ಹೋದಾಗ ಸಂಜೆ ಅಲ್ಲಿಯೇ ಬಿದ್ದು ಮೃತಪಟ್ಟರೆ, ಗಂಗಮ್ಮ ದೇವದಾಸಿ(60) ಹಾಗೂ ಅಂಗವಿಕಲ ಪ್ರದೀಪ ತಿಮ್ಮಣ್ಣ ಪೂಜಾರಿ (15) ಹಾಸಿಗೆಯಲ್ಲೇ ನಿಧನರಾಗಿದ್ದಾರೆ. ದುರ್ಗಮ್ಮ ಹನುಮಂತಪ್ಪ ಉಪ್ಪಾರ್ (60) ತುಮಕೂರಲ್ಲಿ ಕೊನೆಯುಸಿರೆಳೆದಿದ್ದಾರೆ.


ರಾಯಚೂರು ತಾಲ್ಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ದೇವಸ್ಥಾನಕ್ಕೆ ಹೋಗಿ ಮನೆಗೆ ಬರುತ್ತಿದ್ದ ಹನುಮಂತ (45) ಮೃತಪಟ್ಟಿದ್ದಾರೆ. ರಾಯಚೂರು ತಾಲ್ಲೂಕಿನ ಶಕ್ತಿನಗರದ ವೈಟಿಪಿಎಸ್ ಮುಂಭಾಗ ರಾಯಚೂರು–ಹೈದರಾಬಾದ್ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಚಾಲಕ ರಸ್ತೆ ಬದಿಗೆ ಕಾರು ನಿಲ್ಲಿಸಿ ಹೊರಗೆ ಬಂದಿದ್ದಾರೆ.

Join Whatsapp