ರಾಸಲೀಲೆ CD | ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ

Prasthutha|

ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವರು ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ನಡೆಯಬೇಕಾಗಿದ್ದ ಕ್ಯಾಬಿನೆಟ್ ಸಭೆಗೂ ಮುನ್ನವೇ ರಮೇಶ್ ತನ್ನ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಕಳಿಸಿ ತನ್ನ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.

- Advertisement -

ತಾನು ಈ ಪ್ರಕರಣದಲ್ಲಿ ನಿರ್ದೋಷಿಯಾಗಿದ್ದು, ಪಕ್ಷಕ್ಕಾಗುವ ಮುಜುಗರವನ್ನು ತಪ್ಪಿಸಲು ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಅವರು ಈ ವೇಳೆ ತಿಳಿಸಿದ್ದಾರೆ.

ಅದು ನಕಲಿ ಸಿಡಿ ಆಗಿದೆ.  ಆದರೂ ಪಕ್ಷಕ್ಕೆ ಮುಜುಗುರ ಉಂಟುಮಾಡಬಾರದು ಎಂಬ ದೃಷ್ಟಿಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಜಾರಕಿಹೊಳಿ ಹೇಳಿದ್ದಾರೆ.

Join Whatsapp