ರೈತರ ಹೋರಾಟ | ಖ್ಯಾತ ಚಲನಚಿತ್ರ ತಾರೆಯರನ್ನು ಬಳಸಿ ಸ್ವಯಂ ರಕ್ಷಣೆಗಿಳಿದ ಕೇಂದ್ರ

Prasthutha|

- Advertisement -

ರೈತರ ಹೋರಾಟಕ್ಕೆ ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು ತಮ್ಮ ಬೆಂಬಲವನ್ನು ಘೋಷಿಸಿದಾಗ ಕೇಂದ್ರ ಸರಕಾರ ಬಾಲಿವುಡ್ ತಾರೆಯರನ್ನು ಉಪಯೋಗಿಸಿ ತನ್ನನ್ನು ರಕ್ಷಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಚಲನಚಿತ್ರ ತಾರೆಯರಾದ ಅಕ್ಷಯ್ ಕುಮಾರ್, ಅಜಯ್ ದೇವ್‌ಗನ್, ಸುನಿಲ್ ಶೆಟ್ಟಿ, ನಿರ್ಮಾಪಕ ಮತ್ತು ನಿರ್ದೇಶಕ ಕರಣ್ ಜೋಹರ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಕೇಂದ್ರ ಸರಕಾರಕ್ಕೆ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸುತ್ತಿದ್ದಾರೆ.

‘ಭಾರತ ಅಥವಾ ಭಾರತೀಯ ನೀತಿಗಳ ವಿರುದ್ಧವಾದ ಸುಳ್ಳು ಪ್ರಚಾರಕ್ಕೆ ಬಲಿಯಾಗಬೇಡಿ. ಎಲ್ಲಾ ಆಂತರಿಕ ಕಲಹಗಳನ್ನು ಬದಿಗಿಟ್ಟು ಈ ಸಮಯದಲ್ಲಿ ಒಗ್ಗಟ್ಟಾಗಿ ನಿಲ್ಲುವುದು ಮುಖ್ಯ. ರೈತರು ದೇಶದ ಬಹಳ ಮುಖ್ಯವಾದ ಭಾಗ. ಅವರ ಸಮಸ್ಯೆಗಳನ್ನು ಪರಿಹರಿಸುವ ಪ್ರಯತ್ನಗಳನ್ನು ಕೇಂದ್ರ ಸರಕಾರ ಮಾಡುತ್ತಿದೆ’ ಎಂದು ಅಕ್ಷಯ್ ಕುಮಾರ್ ವಿದೇಶಾಂಗ ಸಚಿವಾಲಯದ ಹೇಳಿಕೆಯನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.

- Advertisement -

ನಾವು ಪ್ರಕ್ಷುಬ್ಧ ಕಾಲದಲ್ಲಿ ಜೀವಿಸುತ್ತಿದ್ದೇವೆ, ಪ್ರತಿ ಬಾರಿಯೂ ವಿವೇಚನೆ ಮತ್ತು ತಾಳ್ಮೆ ಅಗತ್ಯವಿರುತ್ತದೆ. ಪರಿಹಾರವನ್ನು ಕಂಡುಹಿಡಿಯಲು ಒಟ್ಟಾಗಿ ಶ್ರಮಿಸೋಣ. ಯಾರೂ ನಮ್ಮನ್ನು ವಿಭಜಿಸಲು ಬಿಡಬೇಡಿ “ಎಂದು ಕರಣ್ ಜೋಹರ್ ಹೇಳಿದ್ದಾರೆ.

ಅರ್ಧ ಸತ್ಯಗಳಿಗಿಂತ ಅಪಾಯಕಾರಿ ಏನೂ ಇಲ್ಲ. ನಾವು ಯಾವಾಗಲೂ ವಿಷಯಗಳ ಬಗ್ಗೆ ಸಮಗ್ರ ದೃಷ್ಟಿಕೋನವನ್ನು ಹೊಂದಿರಬೇಕು “ಎಂದು ಕೇಂದ್ರವನ್ನು ಬೆಂಬಲಿಸಿ ಸುನಿಲ್ ಶೆಟ್ಟಿ ಹೇಳಿದ್ದಾರೆ.

ಭಾರತದ ನೀತಿಗಳ ವಿರುದ್ಧವಾದ ಸುಳ್ಳು ಪ್ರಚಾರಕ್ಕೆ ಬಲಿಯಾಗಬೇಡಿ ಎಂದು ಅಜಯ್ ದೇವ್‌ಗನ್ ಟ್ವೀಟ್ ಮಾಡಿದ್ದಾರೆ.

ಟ್ವಿಟರ್‌ನಲ್ಲಿ 100 ಮಿಲಿಯನ್‌ಗೂ ಹೆಚ್ಚು ಫಾಲೋವರ್ಸ್‌ಗಳನ್ನು ಹೊಂದಿರುವ ಅಂತರರಾಷ್ಟ್ರೀಯ ಪಾಪ್ ತಾರೆ ರಿಹಾನ್ನಾ ಅವರು ರೈತರ ಪ್ರತಿಭಟನೆಯ ಬಗ್ಗೆ ಏಕೆ ಚರ್ಚೆ ನಡೆಯುತ್ತಿಲ್ಲ ಎಂದು ಟ್ವೀಟ್ ಮಾಡಿದ್ದರು. ರಿಹಾನ್ನಾ ಅವರ ಟ್ವೀಟ್‌ನೊಂದಿಗೆ ಹೆಚ್ಚಿನ ಅಂತರರಾಷ್ಟ್ರೀಯ ಸೆಲೆಬ್ರಿಟಿಗಳು ರೈತರ ಪ್ರತಿಭಟನೆಗೆ ಒಗ್ಗಟ್ಟನ್ನು ಪ್ರದರ್ಶಿಸಿದ್ದರು.

Join Whatsapp