ಶಿವಮೊಗ್ಗ |ಕಿಡಿಗೇಡಿಗಳಿಂದ 20ಕ್ಕೂ ಹೆಚ್ಚು ವಾಹನಗಳು ಜಖಂ!

Prasthutha|

ಶಿವಮೊಗ್ಗ :  ಮನೆಯ ಎದುರು ನಿಲ್ಲಿಸಿದ್ದ ಕಾರು, ಬೈಕ್ ಹಾಗೂ ಆಟೋಗಳು ಸೇರಿ 20ಕ್ಕೂ ಹೆಚ್ಚು ವಾಹನಗಳನ್ನು  ಕಿಡಿಗೇಡಿಗಳು ಜಖಂಗೊಳಿಸಿದ ಘಟನೆ ಶಿವಮೊಗ್ಗ ನಗರದ ಸಿದ್ದಯ್ಯ ರಸ್ತೆ ಹಾಗೂ ಎಂಕೆಕೆ ರಸ್ತೆಯಲ್ಲಿ ನಡೆದಿದೆ.

- Advertisement -

ನಿನ್ನೆ ತಡರಾತ್ರಿ, 11 ಕಾರುಗಳು, 10ಕ್ಕೂ ಹೆಚ್ಚು ಬೈಕ್ ಗಳು ಹಾಗೂ ಒಂದು ಆಟೋ ಜಖಂಗೊಂಡಿದ್ದು, ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಈಶ್ವರಪ್ಪ ಭೇಟಿ ನೀಡಿ ಕಿಡಿಗೇಡಿಗಳ ವಿರುದ್ದ ಕೂಡಲೇ ಕ್ರಮ ಕೈಗೊಳ್ಳಲು ಎಸ್ ಪಿ‌ ಲಕ್ಷ್ಮೀಪ್ರಸಾದ್ ಅವರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಇದೇ ರಸ್ತೆಯಲ್ಲಿ ಈ ಹಿಂದೆಯೂ ಕಿಡಿಗೇಡಿಗಳು ವಾಹನಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು ಎನ್ನಲಾಗಿದ್ದು, ಇದೀಗ ವಾಹನಗಳ ಗ್ಲಾಸ್ ಒಡೆದು ಜಖಂ ಮಾಡಿದ್ದಾರೆ ಎಂದು ವರದಿಯಾಗಿದೆ.

Join Whatsapp