ಸಾಮೂಹಿಕ ಮತಾಂತರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ದೆಹಲಿ ಆಮ್ ಆದ್ಮಿ ಸಚಿವ ರಾಜೀನಾಮೆ

Prasthutha|

ದೆಹಲಿ: ದೆಹಲಿಯಲ್ಲಿ ನಡೆದ ಸಾಮೂಹಿಕ ಮತಾಂತರ ಕಾರ್ಯಕ್ರಮದಲ್ಲಿ ಉಪಸ್ಥಿತರಾಗಿದ್ದ ದೆಹಲಿ ಆಮ್ ಆದ್ಮಿ ಪಕ್ಷದ ಮುಖಂಡ ಹಾಗೂ ಸಮಾಜ ಕಲ್ಯಾಣ ಸಚಿವ ರಾಜೇಂದ್ರ ಪಾಲ್ ಗೌತಮ್ ಕೊನೆಗೂ ರಾಜೀನಾಮೆಯನ್ನು ನೀಡಿದ್ದಾರೆ.

- Advertisement -

ಪ್ರಸ್ತುತ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ದಲಿತರು ಸೇರಿ, ಹಿಂದೂಗಳು ಸಾಮೂಹಿಕವಾಗಿ ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಸಚಿವ ರಾಜೇಂದ್ರ ಪಾಲ್ ಗೌತಮ್ ಭಾಗಿಯಾಗಿದ್ದರು.

ಈ ವೇಳೆ ಹಿಂದೂ ಧರ್ಮದ ದೇವರು, ದೇವತೆಗಳ ವಿರುದ್ಧ ಘೋಷಣೆ ಕೂಗಲಾಗಿತ್ತು ಎಂದು ಆರೋಪಿಸಿ ಬಿಜೆಪಿಯು ಸಚಿವ ರಾಜೇಂದ್ರ ಮತ್ತು ಮುಖ್ಯಮಂತ್ರಿ ಕೇಜ್ರಿವಾಲ್ ವಿರುದ್ಧ ದೂರು ನೀಡಿತ್ತು.

- Advertisement -

ಈ ಕಾರಣಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ರಾಜೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬ ಆಗ್ರಹ ಭುಗಿಲೆದ್ದಿತ್ತು. ಇದೀಗ ಅವರು ರಾಜೀನಾಮೆಯನ್ನು ನೀಡಿದ್ದಾರೆ.

Join Whatsapp