ಸಾವಿನಲ್ಲೂ ಒಂದಾದ ಕರಾವಳಿಯ ಸಹೋದರರು

Prasthutha|

ಮಂಗಳೂರು : ಸಹೋದರರಿಬ್ಬರು ಒಂದೇ ದಿನದಲ್ಲಿ ಮೃತ ಪಟ್ಟ ಘಟನೆ ಇಂದು ಕಾರ್ಕಳದಲ್ಲಿ ನಡೆದಿದೆ. ಸಾಣೂರು ನಿವಾಸಿ ಮಿಯಾರು ಗುಂಡಾಜೆ ಬಳಿಯ ರಾಜಾರಾಮ ರಾವ್ (55) ಇಂದು ಬೆಳಗ್ಗೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗೆ ಮೃತ ಪಟ್ಟರೆ, ಸಹೋದರ ಸಾಣೂರು ಚಿಕ್ಕಬೆಟ್ಟು ನಿವಾಸಿ ಗಣೇಶ್ ರಾವ್ (60) ಸಂಜೆ ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

- Advertisement -

ರಾಜರಾಮ್ ರಾವ್ ಅವರು ಇತ್ತೀಚೆಗೆ ಅಪಘಾತಕ್ಕೆ ಒಳಗಾಗಿದ್ದು, ಚಿಕಿತ್ಸೆಗಾಗಿ ಕಾರ್ಕಳ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ಮೃತಪಟ್ಟಿದ್ದಾರೆ.

ಹಿರಿಯ ಸಹೋದರ ಗಣೇಶ್ ರಾವ್, ಜಾಂಡಿಸ್ ಕಾಯಿಲೆಯಿಂದ ಬಳಲುತಿದ್ದರು. ಇವರು ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಇಂದು ಸಂಜೆ 5 ಗಂಟೆಯ ಆಸುಪಾಸಿನ ಸಮಯದಲ್ಲಿ ಮೃತಪಟ್ಟಿದ್ದಾರೆ. ಇಬ್ಬರು ಪ್ರತ್ಯೇಕವಾಗಿ ಕುಟುಂಬ ಸದಸ್ಯರ ಜೊತೆ ವಾಸವಿದ್ದರು.

Join Whatsapp